ಬ್ರೇಕಿಂಗ್ ನ್ಯೂಸ್
21-02-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಬಿಟ್ ಕಾಯಿನ್ ಹಗರಣವನ್ನು ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಕೆದಕಲು ಆರಂಭಿಸಿದೆ. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಬುಧವಾರ ಮಧ್ಯಾಹ್ನ ವಿಚಾರಣೆಗೆ ಬರುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ಸಿಐಡಿ ಕಚೇರಿಗೆ ಹಾಜರಾದ ಸಂದೀಪ್ ಪಾಟೀಲ್, ಪ್ರಕರಣ ಸಂಬಂಧ ಕೆಲವು ಮಾಹಿತಿಗಳನ್ನು ಒದಗಿಸಿ ವಾಪಸಾಗಿದ್ದಾರೆ. ಸಂದೀಪ್ ಪಾಟೀಲ್ 2019- 20 ರಲ್ಲಿ ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಆಯುಕ್ತರಾಗಿದ್ದಾಗಲೇ ಬಿಟ್ ಕಾಯಿನ್ ಕೇಸ್ ಹೊರಬಂದಿತ್ತು. ಬಳಿಕ ಒಟ್ಟು ಪ್ರಕರಣವನ್ನು ಅಂದಿನ ಸಿಸಿಬಿ ಪೊಲೀಸರು ಮುಚ್ಚಿ ಹಾಕಿದ್ದಾರೆಂದು ಆರೋಪ ಕೇಳಿಬಂದಿತ್ತು. ಬಿಜೆಪಿ ಸರ್ಕಾರದ ಪ್ರಭಾವಿ ರಾಜಕಾರಣಿಗಳು ಹಗರಣದಲ್ಲಿ ಶಾಮೀಲಾಗಿದ್ದರಲ್ಲದೆ, ಪ್ರಮುಖ ಆರೋಪಿ ಶ್ರೀಕಿಯನ್ನು ಬಳಸಿ ಸರ್ಕಾರದ ಬೊಕ್ಕಸಕ್ಕೇ ಕೈಹಾಕಿದ್ದರು. ಹಲವು ವೆಬ್ ಸೈಟ್, ಅಮೆರಿಕದ ಬಿಟ್ ಕಾಯಿನ್ ಸಂಸ್ಥೆಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ಗಳನ್ನು ಕಳವು ಮಾಡಲಾಗಿತ್ತು.
ಕಾಂಗ್ರೆಸ್ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎಸ್ಐಟಿ ತಂಡವನ್ನು ನೇಮಕ ಮಾಡಿತ್ತು. ಇತ್ತೀಚೆಗೆ ಆಗಿನ ಸಿಸಿಬಿ ತಂಡದ ಇಬ್ಬರು ಇನ್ಸ್ ಪೆಕ್ಟರ್ ಗಳನ್ನು ಬಂಧಿಸಿದ್ದ ತಂಡ ಇದೀಗ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದೆ. ಅಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದರು. ಅಲ್ಲದೆ, ಸಿಸಿವಿ ತಂಡದ ಪ್ರಮುಖ ಅಧಿಕಾರಿಗಳೇ ಸಾಕ್ಷ್ಯ ನಾಶಪಡಿಸಿದ ಆರೋಪ ಎದುರಿಸುತ್ತಿದ್ದಾರೆ.
ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆಗೆ ಕರೆಸಿದ್ದರಿಂದ ಮುಂದಿನ ಹಂತದಲ್ಲಿ ರಾಜಕಾರಣಿಗಳನ್ನೂ ತನಿಖೆಗೆ ಕರೆಯುವ ಸಾಧ್ಯತೆಯಿದೆ. ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಯೊಬ್ಬರ ಹೆಸರೂ ಬಿಟ್ ಕಾಯಿನ್ ಹಗರಣದಲ್ಲಿ ಕೇಳಿಬಂದಿತ್ತು.
The Congress government has started raking up the bitcoin scam ahead of the Lok Sabha elections. Senior IPS officer Sandeep Patil has been questioned by the SIT probing the case.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm