ಬ್ರೇಕಿಂಗ್ ನ್ಯೂಸ್
21-02-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಬಿಟ್ ಕಾಯಿನ್ ಹಗರಣವನ್ನು ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಕೆದಕಲು ಆರಂಭಿಸಿದೆ. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಬುಧವಾರ ಮಧ್ಯಾಹ್ನ ವಿಚಾರಣೆಗೆ ಬರುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ಸಿಐಡಿ ಕಚೇರಿಗೆ ಹಾಜರಾದ ಸಂದೀಪ್ ಪಾಟೀಲ್, ಪ್ರಕರಣ ಸಂಬಂಧ ಕೆಲವು ಮಾಹಿತಿಗಳನ್ನು ಒದಗಿಸಿ ವಾಪಸಾಗಿದ್ದಾರೆ. ಸಂದೀಪ್ ಪಾಟೀಲ್ 2019- 20 ರಲ್ಲಿ ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಆಯುಕ್ತರಾಗಿದ್ದಾಗಲೇ ಬಿಟ್ ಕಾಯಿನ್ ಕೇಸ್ ಹೊರಬಂದಿತ್ತು. ಬಳಿಕ ಒಟ್ಟು ಪ್ರಕರಣವನ್ನು ಅಂದಿನ ಸಿಸಿಬಿ ಪೊಲೀಸರು ಮುಚ್ಚಿ ಹಾಕಿದ್ದಾರೆಂದು ಆರೋಪ ಕೇಳಿಬಂದಿತ್ತು. ಬಿಜೆಪಿ ಸರ್ಕಾರದ ಪ್ರಭಾವಿ ರಾಜಕಾರಣಿಗಳು ಹಗರಣದಲ್ಲಿ ಶಾಮೀಲಾಗಿದ್ದರಲ್ಲದೆ, ಪ್ರಮುಖ ಆರೋಪಿ ಶ್ರೀಕಿಯನ್ನು ಬಳಸಿ ಸರ್ಕಾರದ ಬೊಕ್ಕಸಕ್ಕೇ ಕೈಹಾಕಿದ್ದರು. ಹಲವು ವೆಬ್ ಸೈಟ್, ಅಮೆರಿಕದ ಬಿಟ್ ಕಾಯಿನ್ ಸಂಸ್ಥೆಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ಗಳನ್ನು ಕಳವು ಮಾಡಲಾಗಿತ್ತು.
ಕಾಂಗ್ರೆಸ್ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎಸ್ಐಟಿ ತಂಡವನ್ನು ನೇಮಕ ಮಾಡಿತ್ತು. ಇತ್ತೀಚೆಗೆ ಆಗಿನ ಸಿಸಿಬಿ ತಂಡದ ಇಬ್ಬರು ಇನ್ಸ್ ಪೆಕ್ಟರ್ ಗಳನ್ನು ಬಂಧಿಸಿದ್ದ ತಂಡ ಇದೀಗ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದೆ. ಅಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದರು. ಅಲ್ಲದೆ, ಸಿಸಿವಿ ತಂಡದ ಪ್ರಮುಖ ಅಧಿಕಾರಿಗಳೇ ಸಾಕ್ಷ್ಯ ನಾಶಪಡಿಸಿದ ಆರೋಪ ಎದುರಿಸುತ್ತಿದ್ದಾರೆ.
ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆಗೆ ಕರೆಸಿದ್ದರಿಂದ ಮುಂದಿನ ಹಂತದಲ್ಲಿ ರಾಜಕಾರಣಿಗಳನ್ನೂ ತನಿಖೆಗೆ ಕರೆಯುವ ಸಾಧ್ಯತೆಯಿದೆ. ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಯೊಬ್ಬರ ಹೆಸರೂ ಬಿಟ್ ಕಾಯಿನ್ ಹಗರಣದಲ್ಲಿ ಕೇಳಿಬಂದಿತ್ತು.
The Congress government has started raking up the bitcoin scam ahead of the Lok Sabha elections. Senior IPS officer Sandeep Patil has been questioned by the SIT probing the case.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm