ಬ್ರೇಕಿಂಗ್ ನ್ಯೂಸ್
22-02-24 04:41 pm HK News Desk ಕರ್ನಾಟಕ
ಮೈಸೂರು, ಫೆ.22: ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ. ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ. ಅವರಿಗು ಇವರಿಗೂ ಎಲ್ಲಿದೆ ಹೋಲಿಕೆ. ಸುಮ್ಮನೆ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಕಿರುಚುವುದನ್ನು ಕಲಿತಿದ್ದಾನೆ. ಸಿದ್ದರಾಮಯ್ಯರಿಗು ಜಮೀರ್ ಗು ಏನು ವ್ಯತ್ಯಾಸ ಇದೆ ಹೇಳಿ. ಇಬ್ಬರು ಸುಮ್ಮನೆ ಕೂಗುತ್ತಾರೆ. ಇವರು ಹೆರಿಗೆ ವಾರ್ಡ್ ನಲ್ಲಿ ಕಿರುಚಿದರೆ ಹೆರಿಗೆಯೇ ಆಗಿಬಿಡುತ್ತದೆ. ಹೀಗೆಂದು ಸಿಎಂ ಸಿದ್ದರಾಮಯ್ಯ ಬಗ್ಗೆ ಚಾಮರಾಜನಗರ ಸಂಸದ ಶ್ರೀನಿವಾಸಪ್ರಸಾದ್ ಕುಹಕವಾಡಿದ್ದಾರೆ.
ಸಿದ್ದರಾಮಯ್ಯ ಆ ರೀತಿಯಲ್ಲಿ ಕೂಗುವುದನ್ನು ಕಲಿತಿದ್ದಾರೆ. ನಿರ್ಮಲಾ ಸೀತರಾಮನ್, ರಾಷ್ಟ್ರಪತಿ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇಂತಹ ಸಿದ್ದರಾಮಯ್ಯ ಬಗ್ಗೆ ಏನು ಮಾತಾಡಲಿ. ಗ್ಯಾರಂಟಿಯಿಂದ ಗೆದ್ದು ಅದೇ ಗುಂಗಿನಲ್ಲಿ ಇದ್ದಾರೆ. ಮೋದಿ ಸರ್ಕಾರ ಮಾಡಿರುವ ಜನಪರ ಯೋಜನೆಗಳ ಮುಂದೆ ಇದೆಲ್ಲ ನಡೆಯುತ್ತ ನೋಡೋಣ. ನಮ್ಮ ಹಕ್ಕು ತೆರಿಗೆ ಅಂತ ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿದ್ದಾರೆ. ನಮ್ಮ ತೆರಿಗೆಯನ್ನ ಕೇಳುವ ರೀತಿಯಲ್ಲಿ ಕೇಳಿದ್ರೆ ನಮ್ಮ ತೆರಿಗೆ ಬರುತ್ತೆ. ಯಾವ ಸರ್ಕಾರವೂ ನಮಗೆ ಅನ್ಯಾಯ ಮಾಡುವುದಿಲ್ಲ. ನಾನು ಹಿಂದೆ ಕಂದಾಯ ಸಚಿವನಾಗಿದ್ದಾಗಲೂ ಹೋಗಿ ಕೇಳಿದ್ದಕ್ಕೆ ನಮ್ಮ ಹಣ ನಮಗೆ ಬಂದಿತ್ತು ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.
ಚಾಮರಾಜನಗರ ಲೋಕಸಭೆ ಅಭ್ಯರ್ಥಿ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ನನ್ನ ಇಬ್ಬರು ಅಳಿಯಂದಿರ ಜೊತೆಗೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ನನಗೆ ನನ್ನ ಅಳಿಯ ಡಾ.ಮೋಹನ್ ಆಕಾಂಕ್ಷಿ ಎನ್ನುವುದು ಗೊತ್ತಿತ್ತು. ಈಗ ಹರ್ಷವರ್ಧನ್ ಕೂಡ ಆಕಾಂಕ್ಷಿ ಎಂಬುದು ಗೊತ್ತಾಗಿದೆ. ಈಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ. ಅವರಿಬ್ಬರೂ ತುಂಬಾ ಅನ್ಯೋನ್ಯವಾಗಿದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ. ಚಾಮರಾಜನಗರ ಕ್ಷೇತ್ರದ ಟಿಕೇಟ್ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನ ವಿಜಯೇಂದ್ರರಿಗೆ ಹೇಳಿದ್ದೇನೆ ಎಂದರು.
ಮಾರ್ಚ್ 17 ರ ನಂತರ ಚುನಾವಣೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಹೋಗಿವುದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆ ಎಂದರು. ಮಹದೇವಪ್ಪ ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ನಿರಾಕರಿಸಿದ ಅವರು, ಅವರು ನಮ್ಮ ವಿರೋಧಿಗಳು, ಅವರ ಬಗ್ಗೆ ನಾನು ಏನೂ ಮಾತನಾಡಲ್ಲ ಎಂದರು.
Mp Mysuru Srinivas Prasad says siddaramaiah is a frog in the well, and Modi doesn't know to swim. Says what is the difference between siddaramai and Zameer. They both are meant only to scream and if the scream even a pregnant lady can deliver baby easily added
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm