ಬ್ರೇಕಿಂಗ್ ನ್ಯೂಸ್
07-08-20 07:30 am Headline Karnataka News Network ಕರ್ನಾಟಕ
ಚಿಕ್ಕಮಗಳೂರು (ಆ. 7): ಮಲೆನಾಡಿನ ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಇಂದು ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಸುಮಾರು ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕಾಫಿನಾಡಿನ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯಿಂದ ಗುಡ್ಡ ಕುಸಿದು, ಚಾರ್ಮಾಡಿ ಘಾಟ್ ಬಂದ್ ಆಗಿದೆ. ಹಾಗೇ ಶೃಂಗೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯೂ ಬಂದ್ ಆಗಿದೆ.
ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾದ ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಭೂ ಕುಸಿತವಾಗಿದೆ. ಇದರಿಂದ ದಕ್ಷಿಣ ಕನ್ನಡ- ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕ ರಸ್ತೆ ಬಂದ್ ಆಗಿದೆ. ರಸ್ತೆಗೆ ಬಿದ್ದಿರುವ ಭಾರೀ ಗಾತ್ರದ ಬಂಡೆ-ಮರ-ಮಣ್ಣಿನಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಚಾರ್ಮಾಡಿ ಘಾಟ್ ಅಲೇಕಾನ್ ಬಳಿ ಘಟನೆ ನಡೆದಿದೆ. ಇದರಿಂದ ಮತ್ತೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಮಣ್ಣು ತೆರೆವು ಕಾರ್ಯದಲ್ಲಿ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ನಿರತರಾಗಿದ್ದಾರೆ. ಎರಡು ಜೆಸಿಬಿ ಯಂತ್ರಗಳನ್ನು ಬಳಸಿ ತೆರವು ಕಾರ್ಯ ನಡೆಸಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಂಗಳೂರು ರಸ್ತೆ ಸಂಪರ್ಕ ಬಂದ್ ಆಗಿದ್ದು, ಶೃಂಗೇರಿಯ ಗಾಂಧಿ ಮೈದಾನ ಜಲಾವೃತವಾಗಿದೆ. ಕಪ್ಪೆ ಶಂಕರ ದೇವಾಲಯ ಕೂಡ ಮುಳುಗಡೆಯಾಗಿದೆ. ಹಾಗೇ, ಬಾಳೆಹೊನ್ನೂರು ಪಟ್ಟಣದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ ನದಿಯಿಂದ ಬಾಳೆಹೊನ್ನೂರಿನ ಸಂತೆ ಮೈದಾನದ ಕಟ್ಟಡಗಳು, ಮಳಿಗೆಗಳು ಜಲಾವೃತವಾಗಿವೆ. ಇದರಿಂದ ಬಾಳೆಹೊನ್ನೂರು-ಕಳಸ ಸಂಪರ್ಕ ಕಡಿತಗೊಂಡಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ಭಾಗದಲ್ಲೂ ಮಳೆ ಮುಂದುವರೆದಿದೆ. ಇದರಿಂದ ಮಲೆನಾಡಿನ ಜನಜೀವನದ ಸಂಪೂರ್ಣ ಅಸ್ತವ್ಯಸ್ತವಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm