ಬ್ರೇಕಿಂಗ್ ನ್ಯೂಸ್
07-08-20 07:30 am Headline Karnataka News Network ಕರ್ನಾಟಕ
ಚಿಕ್ಕಮಗಳೂರು (ಆ. 7): ಮಲೆನಾಡಿನ ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಇಂದು ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಸುಮಾರು ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕಾಫಿನಾಡಿನ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯಿಂದ ಗುಡ್ಡ ಕುಸಿದು, ಚಾರ್ಮಾಡಿ ಘಾಟ್ ಬಂದ್ ಆಗಿದೆ. ಹಾಗೇ ಶೃಂಗೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯೂ ಬಂದ್ ಆಗಿದೆ.
ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾದ ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಭೂ ಕುಸಿತವಾಗಿದೆ. ಇದರಿಂದ ದಕ್ಷಿಣ ಕನ್ನಡ- ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕ ರಸ್ತೆ ಬಂದ್ ಆಗಿದೆ. ರಸ್ತೆಗೆ ಬಿದ್ದಿರುವ ಭಾರೀ ಗಾತ್ರದ ಬಂಡೆ-ಮರ-ಮಣ್ಣಿನಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಚಾರ್ಮಾಡಿ ಘಾಟ್ ಅಲೇಕಾನ್ ಬಳಿ ಘಟನೆ ನಡೆದಿದೆ. ಇದರಿಂದ ಮತ್ತೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಮಣ್ಣು ತೆರೆವು ಕಾರ್ಯದಲ್ಲಿ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ನಿರತರಾಗಿದ್ದಾರೆ. ಎರಡು ಜೆಸಿಬಿ ಯಂತ್ರಗಳನ್ನು ಬಳಸಿ ತೆರವು ಕಾರ್ಯ ನಡೆಸಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಂಗಳೂರು ರಸ್ತೆ ಸಂಪರ್ಕ ಬಂದ್ ಆಗಿದ್ದು, ಶೃಂಗೇರಿಯ ಗಾಂಧಿ ಮೈದಾನ ಜಲಾವೃತವಾಗಿದೆ. ಕಪ್ಪೆ ಶಂಕರ ದೇವಾಲಯ ಕೂಡ ಮುಳುಗಡೆಯಾಗಿದೆ. ಹಾಗೇ, ಬಾಳೆಹೊನ್ನೂರು ಪಟ್ಟಣದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ ನದಿಯಿಂದ ಬಾಳೆಹೊನ್ನೂರಿನ ಸಂತೆ ಮೈದಾನದ ಕಟ್ಟಡಗಳು, ಮಳಿಗೆಗಳು ಜಲಾವೃತವಾಗಿವೆ. ಇದರಿಂದ ಬಾಳೆಹೊನ್ನೂರು-ಕಳಸ ಸಂಪರ್ಕ ಕಡಿತಗೊಂಡಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ಭಾಗದಲ್ಲೂ ಮಳೆ ಮುಂದುವರೆದಿದೆ. ಇದರಿಂದ ಮಲೆನಾಡಿನ ಜನಜೀವನದ ಸಂಪೂರ್ಣ ಅಸ್ತವ್ಯಸ್ತವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm