ಬ್ರೇಕಿಂಗ್ ನ್ಯೂಸ್
23-02-24 01:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.23: ಲೋಕಸಭೆ ಚುನಾವಣೆಗೆ ತಯಾರಾಗುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಲಂಚದ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್ ಹಾಕಿದ್ದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದು ಆರು ತಿಂಗಳ ಒಳಗೆ ಮರು ತನಿಖೆ ನಡೆಸಿ ವರದಿ ನೀಡುವಂತೆ ಮಹತ್ವದ ಆದೇಶ ನೀಡಿದೆ.
ಬಿಜೆಪಿ ಮುಖಂಡ, ಬೆಂಗಳೂರಿನ ಮಾಜಿ ಕಾರ್ಪೊರೇಟರ್ ಎನ್. ಆರ್. ರಮೇಶ್ ಅವರು ದಾಖಲು ಮಾಡಿದ್ದ ಹುದ್ದೆಗಾಗಿ ಲಂಚದ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಸಾಕ್ಷ್ಯಗಳ ಕೊರತೆ ಇದೆಯೆಂದು ಲೋಕಾಯುಕ್ತ ಅಧಿಕಾರಿಗಳು ಹಾಕಿದ್ದ ಬಿ ರಿಪೋರ್ಟ್ ಕೋರ್ಟಿನಲ್ಲಿ ತಿರಸ್ಕಾರಗೊಂಡಿದ್ದು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಿರುವಾಗಲೇ ರೀ ಓಪನ್ ಆಗಿದೆ.
2014ರಲ್ಲಿ ಬೆಂಗಳೂರಿನ ಟರ್ಫ್ ಕ್ಲಬ್ ಸ್ಟೀವಾರ್ಡ್ ಹುದ್ದೆ ನೀಡಲು ವಿವೇಕಾನಂದ ಎಂಬವರಿಂದ ಚೆಕ್ ಮೂಲಕ 1.30 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿತ್ತು. ಈ ಬಗ್ಗೆ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್. ಆರ್. ರಮೇಶ್ ದೂರು ನೀಡಿದ್ದರು. ಹಣ ನೀಡಿದ್ದ ಬೆನ್ನಲ್ಲೇ ವಿವೇಕಾನಂದ ಟರ್ಫ್ ಕ್ಲಬ್ ಸ್ಟಿವಾರ್ಡ್ ಹುದ್ದೆಗೆ ನೇಮಕಗೊಂಡಿದ್ದರು. ಹೀಗಾಗಿ ಈ ಹಣ ಕಿಕ್ ಬ್ಯಾಕ್ ರೂಪದಲ್ಲಿ ಸಿದ್ದರಾಮಯ್ಯ ಪಡೆದಿದ್ದರು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ತರಾತುರಿಯಲ್ಲಿ ಅಂತಿಮ ವರದಿ ಸಲ್ಲಿಸಿರುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ಕಾನೂನು ಪ್ರಕಾರ ಮರು ತನಿಖೆ ನಡೆಸಿ ಮುಂದಿನ ಆರು ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದು ಕೋರ್ಟ್ ಆದೇಶ ಮಾಡಿದೆ.
ದೂರಿಗೆ ಸಂಬಂಧಿಸಿ ಲೋಕಾಯುಕ್ತ ನೋಟೀಸಿಗೆ 2023ರ ಜೂನ್ 4ರಂದು ಲಿಖಿತ ಉತ್ತರ ನೀಡಿದ್ದ ಸಿದ್ದರಾಮಯ್ಯ, ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದರು. ತನಿಖಾಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ದ ವಿವೇಕಾನಂದ, ನಿವೇಶನ ಖರೀದಿ ಸಲುವಾಗಿ ಸಿಎಂ ಸಿದ್ದರಾಮಯ್ಯ 1.30 ಕೋಟಿ ರೂ. ಚೆಕ್ ಪಡೆದಿದ್ದರು ಎಂದು ಹೇಳಿದ್ದರು. ಸರಕಾರ 2022ರಲ್ಲಿಯೂ ಟರ್ಫ್ ಕ್ಲಬ್ ಸ್ಟಿವಾರ್ಡ್ ಹುದ್ದೆಗೆ ನಾಮನಿರ್ದೇಶನ ಮಾಡಿತ್ತು ಎಂದೂ ತಿಳಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವೇಕಾನಂದ ಬಳಿ ಪಡೆದಿದ್ದ ಸಾಲದ ಬಗ್ಗೆ ಚುನಾವಣೆ ಅಫಿಡವಿಟ್ ಮತ್ತು ಲೋಕಾಯುಕ್ತಕ್ಕೆ ಸಲ್ಲಿಸಿದ ಉತ್ತರದಲ್ಲಿಯೂ ಉಲ್ಲೇಖಿಸಿದ್ದರು. ಆದರೆ ಚುನಾವಣೆ ಹೊತ್ತಲ್ಲಿ ಲಂಚದ ಆರೋಪದ ಪ್ರಕರಣ ಮುನ್ನೆಲೆಗೆ ಬಂದಿರುವುದು ವಿಪಕ್ಷಗಳಿಗೆ ರಾಜಕೀಯ ಅಸ್ತ್ರವಾಗುವ ಸಾಧ್ಯತೆಯಿದೆ.
Chief Minister Siddaramaiah, who is gearing up for the Lok Sabha elections, is facing a legal crisis. A special court for people's representatives rejected the 'B' report submitted by the Lokayukta officials in the bribery case during the previous Siddaramaiah government and directed it to re-investigate and submit a report within six months.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm