ಬ್ರೇಕಿಂಗ್ ನ್ಯೂಸ್
24-02-24 04:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.24: ಉಡುಪಿ- ಚಿಕ್ಕಮಗಳೂರಿನ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೋ ಅವರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಪಾರ್ಟಿಯಲ್ಲಿ ಇದೇ ಕೆಲಸ ಮಾಡಿಕೊಂಡು ಬಂದವರು, ಇಂತಹ ಅಭಿಯಾನಕ್ಕೆ ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಒಂದು ಕಂಟ್ರಾಕ್ಟರ್ ಜೊತೆ ನಾನು ಚಹಾ ಕೂಡ ಕುಡಿದಿಲ್ಲ. ಕಂಟ್ರಾಕ್ಟರ್ ಮುಖವನ್ನು ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರದ ಯೋಜನೆಗಳನ್ನ ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಟಿಕೆಟ್ ಕೇಳುವವರು ವಿರೋಧ ಮಾಡುತ್ತಾರೆ, ಆದರೆ ಒಬ್ಬರನ್ನ ತೇಜೋವಧೆ ಮಾಡುವುದು ತಪ್ಪು. ಟಿಕೆಟ್ ಕೇಳುವುದು ತಪ್ಪಲ್ಲ, ಟಿಕೆಟ್ ಕೇಳುವುದಕ್ಕೂ ರೀತಿಗಳಿರುತ್ತೆ. ಯಾರದ್ದೋ ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.


ನನ್ನ ವಿರೋಧ ಮಾಡುವವರಿಗೂ ಆಹ್ವಾನ ನೀಡುತ್ತೇನೆ. ಅಭಿವೃದ್ಧಿ ಹೆಸರಲ್ಲಿ ಚರ್ಚೆ ಆಗ್ಬೇಕು. ಮುಕ್ತ ಅವಕಾಶ ಇದೆ, ಬನ್ನಿ ಚರ್ಚೆಗೆ. ಇಂತಹ ವಿರೋಧಗಳಿದ್ದಾಗ ನಾವು ಮತ್ತಷ್ಟು ಗಟ್ಟಿಯಾಗುತ್ತೇವೆ ಎಂದು ಹೇಳಿದರು. ಅಪಮಾನ, ಅನವಶ್ಯಕ ಅಪಪ್ರಚಾರ ಮಾಡುವುದು ಸರಿಯಲ್ಲ. ಯಾರೋ ವಿರೋಧ, ಪರ ಮಾತನಾಡಿದರೂ, ಅಭಿಯಾನ ಮಾಡಿದರು ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತೇಜೋವಧೆ ಮಾಡಿ ಟಿಕೆಟ್ ಕೇಳುವುದು ಸರಿಯಲ್ಲ ShobhaKarandlaje | Loksabha | Electoin | Hosadiganthdigital pic.twitter.com/UW4cuPpN3K
— Hosadigantha Digital (@HosadiganthaWeb) February 24, 2024
Campaign against Shobha Karandlaje in chikkamagaluru, Shobha turns angry on BJP Party members.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm