ಬ್ರೇಕಿಂಗ್ ನ್ಯೂಸ್
25-11-20 07:02 pm Bengaluru Correspondent ಕರ್ನಾಟಕ
ಮೈಸೂರು, ನ.25: ಸಿಎಂ ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಗ್ರಾಮದಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮುಂದೆ ಎರಡೂವರೆ ವರ್ಷ ತನ್ನ ಆಡಳಿತ ಇದೆ. ಇನ್ನು ಎರಡೂವರೆ ವರ್ಷದಲ್ಲಿ ಎಲ್ಲಾ ಕೆಲಸ ಮಾಡಿ ಮುಗಿಸುವ ಅಪೇಕ್ಷೆ ಇದೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ಎರಡೂವರೆ ವರ್ಷ ತಾವೇ ಸಿಎಂ ಎಂದು ಹೇಳಿಕೊಂಡಿದ್ದಾರೆ.
ಮುಡುಕುತೊರೆ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗೆ 10 ಕೋಟಿ ಬಿಡುಗಡೆ ಮಾಡುತ್ತೇನೆ. ಒಂದೇ ಬಾರಿಗೆ 10 ಕೋಟಿ ಬಿಡುಗಡೆ ಮಾಡುತ್ತಿದ್ದು ಎರಡು ವರ್ಷದಲ್ಲಿ ಕೆಲಸ ಮುಗಿಸಬೇಕು ಎಂದು ಆಡಳಿತ ಸಮಿತಿಗೆ ತಾಕೀತು ಮಾಡಿದರು. ಅಲ್ಲದೆ ದೇವಸ್ಥಾನ ಅಭಿವೃದ್ಧಿಗೆ ಹಣದ ಕೊರತೆ ಬರಲ್ಲ. ದೇವರೇ ಹಣ ಕೊಡ್ತಾನೆ, ದೇವಸ್ಥಾನಕ್ಕೆ ಹಣ ಕೊಡಲು ಯಾಕ್ ತೊಂದರೆ ಆಗಬೇಕು ಎಂದ ಯಡಿಯೂರಪ್ಪ, ರಾಜ್ಯದ 136 ದೇವಸ್ಥಾನಗಳಿಗೆ 136 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. ಒಬ್ಬ ಮನುಷ್ಯನ ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಇನ್ನೂ ಎರಡುವರೆ ವರ್ಷ ನನ್ನ ಅಧಿಕಾರ ಇದೆ. ಈ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈ ಮೂಲಕ ನನ್ನ ಸಾಧನೆ ಮಾತನಾಡುತ್ತದೆ ಎಂದು ಹೇಳಿದರು.

ಸಿಎಂ ಬದಲು ರಾಗಕ್ಕೆ ಡಿಸಿಎಂ ಟಾಂಗ್
ಇದೇ ವೇಳೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಸಿಎಂ ಬದಲಾವಣೆಯ ಮಾತಾಡುವ ಮಂದಿಗೆ ಟಾಂಗ್ ಇಟ್ಟಿದ್ದಾರೆ. ಯಡಿಯೂರಪ್ಪ ಒಂಟಿ ಸಲಗ ಇದ್ದಂತೆ. ಅವರು ಇಡೀ ರಾಜ್ಯವನ್ನು ಒಬ್ಬರೇ ಸುತ್ತಿ ಪಕ್ಷ ಕಟ್ಟಿದ್ದಾರೆ. ಮೊದಲು ಸಿಎಂ ಆಗಿ ಅವರು ಒಬ್ಬರೇ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಯಾರು ಸಚಿವರು ಇರಲಿಲ್ಲ. ಆದರೆ, ರಾಜ್ಯದಲ್ಲಿ ಪ್ರವಾಹ ಬಂದು ನಾಶ ನಷ್ಟ ಉಂಟಾಗಿತ್ತು. ಈ ವೇಳೆ ಇಡೀ ರಾಜ್ಯದಲ್ಲಿ ಒಬ್ಬರೇ ಪ್ರವಾಸ ಮಾಡಿ, ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ರು. ಯಡಿಯೂರಪ್ಪ ಅವರು ಒಂದು ರೀತಿ ಒಂಟಿ ಸಲಗ ಇದ್ದ ಹಾಗೆ ಎಂದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ್ರು.
Two and half years I will be the cm of Karnataka stated BS Yediyurapp in Mysore
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm