ಬ್ರೇಕಿಂಗ್ ನ್ಯೂಸ್
25-11-20 07:02 pm Bengaluru Correspondent ಕರ್ನಾಟಕ
ಮೈಸೂರು, ನ.25: ಸಿಎಂ ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಗ್ರಾಮದಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮುಂದೆ ಎರಡೂವರೆ ವರ್ಷ ತನ್ನ ಆಡಳಿತ ಇದೆ. ಇನ್ನು ಎರಡೂವರೆ ವರ್ಷದಲ್ಲಿ ಎಲ್ಲಾ ಕೆಲಸ ಮಾಡಿ ಮುಗಿಸುವ ಅಪೇಕ್ಷೆ ಇದೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ಎರಡೂವರೆ ವರ್ಷ ತಾವೇ ಸಿಎಂ ಎಂದು ಹೇಳಿಕೊಂಡಿದ್ದಾರೆ.
ಮುಡುಕುತೊರೆ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗೆ 10 ಕೋಟಿ ಬಿಡುಗಡೆ ಮಾಡುತ್ತೇನೆ. ಒಂದೇ ಬಾರಿಗೆ 10 ಕೋಟಿ ಬಿಡುಗಡೆ ಮಾಡುತ್ತಿದ್ದು ಎರಡು ವರ್ಷದಲ್ಲಿ ಕೆಲಸ ಮುಗಿಸಬೇಕು ಎಂದು ಆಡಳಿತ ಸಮಿತಿಗೆ ತಾಕೀತು ಮಾಡಿದರು. ಅಲ್ಲದೆ ದೇವಸ್ಥಾನ ಅಭಿವೃದ್ಧಿಗೆ ಹಣದ ಕೊರತೆ ಬರಲ್ಲ. ದೇವರೇ ಹಣ ಕೊಡ್ತಾನೆ, ದೇವಸ್ಥಾನಕ್ಕೆ ಹಣ ಕೊಡಲು ಯಾಕ್ ತೊಂದರೆ ಆಗಬೇಕು ಎಂದ ಯಡಿಯೂರಪ್ಪ, ರಾಜ್ಯದ 136 ದೇವಸ್ಥಾನಗಳಿಗೆ 136 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. ಒಬ್ಬ ಮನುಷ್ಯನ ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಇನ್ನೂ ಎರಡುವರೆ ವರ್ಷ ನನ್ನ ಅಧಿಕಾರ ಇದೆ. ಈ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈ ಮೂಲಕ ನನ್ನ ಸಾಧನೆ ಮಾತನಾಡುತ್ತದೆ ಎಂದು ಹೇಳಿದರು.

ಸಿಎಂ ಬದಲು ರಾಗಕ್ಕೆ ಡಿಸಿಎಂ ಟಾಂಗ್
ಇದೇ ವೇಳೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಸಿಎಂ ಬದಲಾವಣೆಯ ಮಾತಾಡುವ ಮಂದಿಗೆ ಟಾಂಗ್ ಇಟ್ಟಿದ್ದಾರೆ. ಯಡಿಯೂರಪ್ಪ ಒಂಟಿ ಸಲಗ ಇದ್ದಂತೆ. ಅವರು ಇಡೀ ರಾಜ್ಯವನ್ನು ಒಬ್ಬರೇ ಸುತ್ತಿ ಪಕ್ಷ ಕಟ್ಟಿದ್ದಾರೆ. ಮೊದಲು ಸಿಎಂ ಆಗಿ ಅವರು ಒಬ್ಬರೇ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಯಾರು ಸಚಿವರು ಇರಲಿಲ್ಲ. ಆದರೆ, ರಾಜ್ಯದಲ್ಲಿ ಪ್ರವಾಹ ಬಂದು ನಾಶ ನಷ್ಟ ಉಂಟಾಗಿತ್ತು. ಈ ವೇಳೆ ಇಡೀ ರಾಜ್ಯದಲ್ಲಿ ಒಬ್ಬರೇ ಪ್ರವಾಸ ಮಾಡಿ, ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ರು. ಯಡಿಯೂರಪ್ಪ ಅವರು ಒಂದು ರೀತಿ ಒಂಟಿ ಸಲಗ ಇದ್ದ ಹಾಗೆ ಎಂದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ್ರು.
Two and half years I will be the cm of Karnataka stated BS Yediyurapp in Mysore
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm