ಬ್ರೇಕಿಂಗ್ ನ್ಯೂಸ್
28-02-24 02:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 27: ''ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪ ಪ್ರಕರಣದ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದೆ. ತನಿಖೆಯ ನಂತರವೇ ನಿರ್ಧಾರಕ್ಕೆ ಬರಲಾಗುವುದು'' ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ''ಘಟನೆಯ ಕುರಿತು ಈಗಾಗಲೇ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಜೆಪಿಯವರು ನೀಡಿರುವ ದೂರನ್ನೂ ಸಹ ಅದರ ಜೊತೆಗೆ ಸೇರಿಸಿಕೊಳ್ಳಲಾಗಿದೆ'' ಎಂದು ಮಾಹಿತಿ ನೀಡಿದ್ದಾರೆ.
''ಪ್ರಕರಣದಲ್ಲಿ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ನಾಸಿರ್ ಹುಸೇನ್ ಜಿಂದಾಬಾದ್ ಎನ್ನಲಾಗಿದೆ ಎಂದಿದ್ದಾರೆ. ಹಾಗಾಗಿ, ಘಟನೆಯ ಕುರಿತು ಮೊದಲು ಸುದ್ದಿ ಪ್ರಸಾರ ಮಾಡಿದವರಿಂದ ಅಲ್ಲಿನ ದೃಶ್ಯಗಳನ್ನ ಪಡೆದುಕೊಂಡು ಎಫ್ಎಸ್ಎಲ್ಗೆ ವೈಜ್ಞಾನಿಕ ಪರಿಶೀಲನೆಗೆ ಕಳಿಸುತ್ತಿದ್ದೇವೆ. ಕೂಗಿದ ವ್ಯಕ್ತಿ, ಆತನ ಅಕ್ಕಪಕ್ಕದಲ್ಲಿದ್ದವರನ್ನು ತನಿಖೆ ಮಾಡಬೇಕು. ಆ ನಂತರದಲ್ಲಿ ಆ ವ್ಯಕ್ತಿ ಪಾಕ್ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ'' ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪ ವಿಚಾರ ಪ್ರತಿಕ್ರಿಯಿಸಿ, ''ಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಏನು ತಪ್ಪು ಮಾಡಿದೆ. ಇದರಲ್ಲಿ ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ಬಿಜೆಪಿಯವರ ಆರೋಪಗಳು ಮೊದಲಿನಿಂದಲೂ ಇವೆ. ಕಾಂಗ್ರೆಸ್ ಪಕ್ಷ ಮುಸ್ಲಿಂ ಪರ ಇದೆ ಎನ್ನುವುದು ಅವರು ಮೊದಲಿನಿಂದಲೂ ಮಾಡಿಕೊಂಡು ಬಂದಿರುವ ಆರೋಪ. ನಾಸಿರ್ ಹುಸೇನ್ ವರ್ತನೆಯ ಬಗ್ಗೆ ಗಮನಿಸಿಲ್ಲ, ಕೋಪದಲ್ಲಿ ಹೇಳಿರಬೇಕು'' ಎಂದು ಪರಮೇಶ್ವರ್ ತಿಳಿಸಿದ್ದಾರೆ.
Pakistan Zindabad Slogans By Congress Supporters video to be sent to FSL says Home Minister only then we can prove of it was Pakistan Zindabad or Nasir Hussain Zindabad he added. The Bharatiya Janata Party (BJP) on Wednesday accused Congress workers of raising "Pakistan Zindabad" slogans inside the Assembly after grand old party leader Naseer Hussain registered a victory in the Rajya Sabha polls.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm