ಬ್ರೇಕಿಂಗ್ ನ್ಯೂಸ್
28-02-24 04:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 28: ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಕಾಂಗ್ರೆಸ್ ನಾಯಕರ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಕೆಲವು ಕಾಂಗ್ರೆಸ್ ಸದಸ್ಯರು ಜೈಕಾರ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಘೋಷಣೆ ಕುಗಿದ್ದಾರ ಎನ್ನೋದು ಮೊದಲು ತನಿಖೆ ಯಾಗಬೇಕು. ಈಗಾಗಲೇ FSL ತನಿಖೆಗೆ ಕೊಟ್ಟಿದ್ದೇವೆ. ಘೋಷಣೆ ಕೂಗಿದ್ದೇ ಆದರೆ ಕ್ರಮ ತೆಗೆದುಕೊಳ್ತೇವೆ. ಯಾರೇ ಆಗಿರಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ತೇವೆ, ದೇಶದ್ರೋಹಿಗಳನ್ನ ಮಟ್ಟ ಹಾಕಬೇಕಿದೆ ಎಂದು ತಿಳಿಸಿದ್ದಾರೆ.
ನಿಜವಾದರೆ ಅದನ್ನು ತೀವ್ರವಾಗಿ ಖಂಡಿಸುತ್ತೇನೆ ;
ಇತ್ತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಸ್ಪೀಕರ್ ಯೂ ಟಿ ಖಾದರ್ ಖಂಡನೆ ಮಾಡಿದ್ದು, ನಿನ್ನೆ ರಾಜ್ಯಸಭೆ ಚುನಾವಣೆ ಬಳಿಕ, ಮಾಧ್ಯಮಗಳ ಮೂಲಕ ಘಟನೆ ತಿಳಿದು ಬಂದಿದೆ. ಅದು ನಿಜವಾದರೆ ಅದನ್ನು ತೀವ್ರವಾಗಿ ಖಂಡಿಸುತ್ತೇನೆ. ಯಾರೇ ಆದರೂ ಸರಿಯೇ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇದು ನನ್ನ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ, ಇದರ ಬಗ್ಗೆ ಸೂಕ್ತ ತನಿಖೆ ಮಾಡಿ ಅತ್ಯಂತ ಕಠಿಣ ಶಿಕ್ಷೆ ಕೊಡಬೇಕು. ನಾನು ಸಿಎಂ ಹಾಗೂ ಗೃಹ ಸಚಿವರಿಗೆ ಸೂಚನೆ ಕೊಡುತ್ತೇನೆ ಎಂದು ತಿಳಿಸಿದರು.
ಅವರು ಮಾಡಲಿ, ನಾವು ತಪ್ಪು ಅಂತ ಹೇಳಲ್ಲ ;
ಅಲ್ಲದೇ, ಪೊಲೀಸರ ಮಾಡಿರೋ ಚಿತ್ರೀಕರಣ, ವಿಧಾನಸೌಧ ಸಿಸಿ ಕ್ಯಾಮರಾ ಎಲ್ಲವನ್ನು ಪಡೆದು ತನಿಖೆ ಮಾಡ್ತೇವೆ. ಕೆಲವರು ನಾಸಿರ್ ಸಾಬ್ ಅಂತಾರೆ, ಕೆಲವರು ಪಾಕಿಸ್ತಾನ ಅಂತಾರೇ. ಇದರ ಸತ್ಯತೆ ವೈಜ್ಞಾನಿಕವಾಗಿ ತಿಳಿಯಬೇಕು ಅಂತ ಎಫ್ಎಸ್ ಎಲ್ ಗೆ ಕಳುಹಿಸುತ್ತಿದ್ದೇವೆ. ಒಂದು ವೇಳೆ ಕೂಗಿದ್ರೆ ಕಾನೂನು ಕ್ರಮ ಆಗೇ ಆಗುತ್ತೆ. ಸದನ ಒಳಗೆ ಹೊರಗೆ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅವರು ಮಾಡಲಿ, ನಾವು ತಪ್ಪು ಅಂತ ಹೇಳಲ್ಲ. ಕಾನೂನು ಚೌಕಟ್ಟಿನಲ್ಲಿ ಮಾಡಲಿ. ಇದರಲ್ಲಿ ಕಾಂಗ್ರೆಸ್ ತಪ್ಪೇನಿದೆ. ಮುಸ್ಲಿಂ ತುಷ್ಟೀಕರಣ ಮಾಡ್ತಾರೆ ಅಂತ ಹೇಳ್ತಾನೆ ಬಂದಿದ್ದಾರೆ, ಹೊಸದೇನು ಅಲ್ಲ ಎಂದರು. ಆದರೆ ನಾಸೀರ್ ಹುಸೇನ್ ಪತ್ರಕರ್ತರ ಮೇಲೆ ದೂಂಡ ವರ್ತನೆ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿ, ಅವರು ಏನ್ ಹೇಳಿದ್ದಾರೆ ಅಂತ ನೋಡಿಲ್ಲ ನಾನು. ನೋಡಿ ಅಮೇಲೆ ಹೇಳ್ತಿನಿ ಎಂದಷ್ಟೇ ತಿಳಿಸಿದರು.
As the BJP staged a protest outside the Karnataka Assembly on Wednesday alleging that Congress supporters had raised ‘Pakistan Zindabad’ slogans on Tuesday after their candidate Syed Nasir Hussain’s victory in the Rajya Sabha polls, Chief Minister Siddaramaiah said “strict action will be taken” if the allegations were proven true.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm