ಬ್ರೇಕಿಂಗ್ ನ್ಯೂಸ್
28-02-24 07:23 pm HK News Desk ಕರ್ನಾಟಕ
ಶಿರಸಿ, ಫೆ 28: ರಾಜ್ಯಸಭಾ ಚುನಾವಣೆಯ ಮತದಾನಕ್ಕೆ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದಾರೆ. ''ಮಂಗಳವಾರ ಮುಂಜಾನೆಯಿಂದ ತಮ್ಮ ಆರೋಗ್ಯದಲ್ಲಿ ಏರುಪೇರು ಆಗಿತ್ತು. ವೈದ್ಯರ ಸಲಹೆಯ ಮೇರೆಗೆ ನಾನು ಮತದಾನಕ್ಕೆ ಹೋಗಲು ಸಾಧ್ಯವಾಗಲಿಲ್ಲ'' ಎಂದು ಸ್ಪಷ್ಟಪಡಿಸಿದರು.
ಯಾರಿಗೋ ಹೆದರಿ, ಬೆದರಿ ಮತದಾನದಿಂದ ದೂರ ಉಳಿದಿಲ್ಲ , ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಹೋಗಲ್ಲ ,ಅನಾರೋಗ್ಯದಿಂದ ಭಾಗವಹಿಸಿಲ್ಲ ಅಷ್ಟೇ ; ಶಾಸಕ ಹೆಬ್ಬಾರ್
ಈ ಕುರಿತು ಯಲ್ಲಾಪುರದಲ್ಲಿ ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಹೆಬ್ಬಾರ್, ''ಆಸ್ಪತ್ರೆಯಲ್ಲೇ ಸಮಯ ಕಳೆದು ಹೋಯಿತು. ಅದಕ್ಕೆ ರಾಜ್ಯಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಯಾರಿಗೋ ಹೆದರಿ, ಬೆದರಿ ಮತದಾನದಿಂದ ದೂರ ಉಳಿದಿಲ್ಲ. ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಎಲ್ಲವನ್ನು ಎದುರಿಸಲು ಸಿದ್ಧ. ಕಾನೂನು ಹೋರಾಟ ಆಗಿರಲಿ ಅಥವಾ ರಾಜಕೀಯ ವಿಷಯ ಆಗಲಿ'' ಎಂದು ಖಡಕ್ ಆಗಿ ಹೇಳಿದರು.
ಪಕ್ಷದ ಮೇಲೆ ಅಸಮಾಧಾನ ಇದೆ- ಹೆಬ್ಬಾರ್: '
'ತನಗೆ ಬಿಜೆಪಿ ಮೇಲೆ ಅಸಮಾಧಾನ ಇದೆ. ತನ್ನನ್ನು ಸ್ಥಳೀಯ ಬಿಜೆಪಿ ನಾಯಕರು ಸೋಲಿಸಲು ಪ್ರಯತ್ನ ಪಟ್ಟರು. ಇದನ್ನು ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ. ಆದ್ರೆ, ಯಾವುದೇ ಕ್ರಮ ಆಗಿಲ್ಲ'' ಎಂದ ಹೆಬ್ಬಾರ್ ಅವರು, ''ಸದ್ಯ ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಹೋಗಲ್ಲ. ಬಿಜೆಪಿಗೆ ರಾಜೀನಾಮೆ ಕೊಡುವ ಪ್ರಮೇಯ ಬಂದಿಲ್ಲ. ನನಗೆ ಪಕ್ಷದ ಮೇಲೆ ಅಸಮಾಧಾನ ಇದೆ. ನನ್ನನ್ನು ಸೋಲಿಸಲು ಮುಂದಾದವರನ್ನೇ ಪೋಷಿಸಲಾಗುತ್ತಿದೆ'' ಎಂದು ಆರೋಪಿಸಿದರು. ಆದ್ರೆ, ಕಾಂಗ್ರೆಸ್ ಸೇರ್ಪಡೆ ವಿಚಾರವನ್ನು ಶಿವರಾಮ್ ಹೆಬ್ಬಾರ್ ತಳ್ಳಿಹಾಕಿದರು.
''ನಾನು ಬಿಜೆಪಿಯ ಶಾಸಕನಾಗಿದ್ದು, ಇಲ್ಲಿ ಶಾಸಕನಾಗಿ ಉಳಿಯುತ್ತೇನೆ. ಆದರೆ, ಕಾದು ನೋಡೋಣ. ಮುಂದೆ ಬದಲಾದ ರಾಜಕಾರಣ ಏನು ಮಾಡಬೇಕು ಎಂಬುದರ ಬಗ್ಗೆ ಚಿಂತಿಸುತ್ತೇನೆ ಎಂದೂ ಸಹ ಪ್ರತಿಕ್ರಿಯಿಸಿದರು. ಇದೇ ವೇಳೆ ಪಾಕಿಸ್ತಾನ ಕುರಿತ ಘೋಷಣೆಗೆ ಸಂಬಂಧಿಸಿದ ಪ್ರತಿಕ್ರಿಯಿಸಿ, ''ಇದನ್ನು ಯಾರೇ ಹೇಳಿದ್ದರೂ ಖಂಡನೀಯ'' ಎಂದರು.
Shivaram Hebbar says will not betray BJP party, give health reason. BJP MLA Shivaram Hebbar, also a former minister, abstained from voting, embarrassing the party leadership in the state.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm