ಬ್ರೇಕಿಂಗ್ ನ್ಯೂಸ್
01-03-24 10:50 am Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪದ ಘಟನೆಯ ಬಗ್ಗೆ ವಿಧಿವಿಜ್ಞಾನ ತಂಡ ವರದಿ ತಯಾರಿಸಿದ್ದು, ಪೊಲೀಸರ ಕೈಸೇರಿದ ಬೆನ್ನಲ್ಲೇ ವಿಡಿಯೋದಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ವಿವಾದಿತ ವಿಡಿಯೋದಲ್ಲಿರುವ ಅಂಶಗಳ ಬಗ್ಗೆ ಎಫ್ಎಸ್ಎಲ್ ನೀಡಿರುವ ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು. ಗುರುವಾರ ಎಫ್ಎಸ್ಎಲ್ ವರದಿ ಕೈಸೇರಿದ ಕೂಡಲೇ ಪೊಲೀಸರು ಹಾವೇರಿಯಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ವ್ಯಕ್ತಿ ಬೆಂಗಳೂರು ಕೇಂದ್ರ ವಿಭಾಗದ ಎಸಿಪಿಯ ಮುಂದೆ ಶರಣಾಗಿದ್ದಾನೆ. ಬೇರೆ ಜಿಲ್ಲೆಗಳಲ್ಲೂ ಇನ್ನಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಯುವಕರು, ಅಂದು ರಾಜ್ಯಸಭೆ ಸದಸ್ಯರ ಜೊತೆಗೆ ವಿಧಾನಸೌಧ ಪ್ರವೇಶ ಮಾಡಿದ್ದ ಹಲವರನ್ನು ವಶಕ್ಕೆ ಪಡೆದು ಪೊಲೀಸರು ಡ್ರಿಲ್ ಮಾಡಿದ್ದಾರೆ. ಯುವಕರು ತಮ್ಮ ಘೋಷಣೆಯ ಬಗ್ಗೆ ಭಿನ್ನ ಹೇಳಿಕೆ ನೀಡಿದ್ದಾರೆ. ನಾಸೀರ್ ಖಾನ್ ಜಿಂದಾಬಾದ್ ಎಂದಷ್ಟೇ ಕೂಗಿದ್ದು ಎಂದು ಹೇಳಿದ್ದಾರೆ. ಗದ್ದಲದಲ್ಲಿ ನಮಗೇನೂ ಅಂತಹದ್ದು ಕೇಳಿಸಿಯೇ ಇಲ್ಲ ಎಂದೂ ಹೇಳಿದ್ದಾರೆ. ಹೀಗಾಗಿ ಕೂಲಂಕಷ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.
ಫೆ.27ರಂದು ರಾಜ್ಯಸಭೆ ಚುನಾವಣೆ ಗೆಲುವಿನ ಸಂಭ್ರಮದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪ ಕೇಳಿಬಂದಿದ್ದು, ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪ್ರತಿಪಕ್ಷಗಳ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಘಟನೆ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
Bangalore Four taken to custody over shouting Pakistan Zindabad slogan. A day after supporters of Rajya Sabha winner from Congress, Syed Nasir Hussain, allegedly raised “Pakistan Zindabad” slogans in the corridors of the Vidhana Soudha, the BJP on Wednesday demanded the resignation of Chief Minister Siddaramaiah
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm