ಬ್ರೇಕಿಂಗ್ ನ್ಯೂಸ್
01-03-24 10:50 am Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪದ ಘಟನೆಯ ಬಗ್ಗೆ ವಿಧಿವಿಜ್ಞಾನ ತಂಡ ವರದಿ ತಯಾರಿಸಿದ್ದು, ಪೊಲೀಸರ ಕೈಸೇರಿದ ಬೆನ್ನಲ್ಲೇ ವಿಡಿಯೋದಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ವಿವಾದಿತ ವಿಡಿಯೋದಲ್ಲಿರುವ ಅಂಶಗಳ ಬಗ್ಗೆ ಎಫ್ಎಸ್ಎಲ್ ನೀಡಿರುವ ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು. ಗುರುವಾರ ಎಫ್ಎಸ್ಎಲ್ ವರದಿ ಕೈಸೇರಿದ ಕೂಡಲೇ ಪೊಲೀಸರು ಹಾವೇರಿಯಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ವ್ಯಕ್ತಿ ಬೆಂಗಳೂರು ಕೇಂದ್ರ ವಿಭಾಗದ ಎಸಿಪಿಯ ಮುಂದೆ ಶರಣಾಗಿದ್ದಾನೆ. ಬೇರೆ ಜಿಲ್ಲೆಗಳಲ್ಲೂ ಇನ್ನಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಯುವಕರು, ಅಂದು ರಾಜ್ಯಸಭೆ ಸದಸ್ಯರ ಜೊತೆಗೆ ವಿಧಾನಸೌಧ ಪ್ರವೇಶ ಮಾಡಿದ್ದ ಹಲವರನ್ನು ವಶಕ್ಕೆ ಪಡೆದು ಪೊಲೀಸರು ಡ್ರಿಲ್ ಮಾಡಿದ್ದಾರೆ. ಯುವಕರು ತಮ್ಮ ಘೋಷಣೆಯ ಬಗ್ಗೆ ಭಿನ್ನ ಹೇಳಿಕೆ ನೀಡಿದ್ದಾರೆ. ನಾಸೀರ್ ಖಾನ್ ಜಿಂದಾಬಾದ್ ಎಂದಷ್ಟೇ ಕೂಗಿದ್ದು ಎಂದು ಹೇಳಿದ್ದಾರೆ. ಗದ್ದಲದಲ್ಲಿ ನಮಗೇನೂ ಅಂತಹದ್ದು ಕೇಳಿಸಿಯೇ ಇಲ್ಲ ಎಂದೂ ಹೇಳಿದ್ದಾರೆ. ಹೀಗಾಗಿ ಕೂಲಂಕಷ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.
ಫೆ.27ರಂದು ರಾಜ್ಯಸಭೆ ಚುನಾವಣೆ ಗೆಲುವಿನ ಸಂಭ್ರಮದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪ ಕೇಳಿಬಂದಿದ್ದು, ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪ್ರತಿಪಕ್ಷಗಳ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಘಟನೆ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
Bangalore Four taken to custody over shouting Pakistan Zindabad slogan. A day after supporters of Rajya Sabha winner from Congress, Syed Nasir Hussain, allegedly raised “Pakistan Zindabad” slogans in the corridors of the Vidhana Soudha, the BJP on Wednesday demanded the resignation of Chief Minister Siddaramaiah
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm