ಬ್ರೇಕಿಂಗ್ ನ್ಯೂಸ್
01-03-24 10:50 am Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪದ ಘಟನೆಯ ಬಗ್ಗೆ ವಿಧಿವಿಜ್ಞಾನ ತಂಡ ವರದಿ ತಯಾರಿಸಿದ್ದು, ಪೊಲೀಸರ ಕೈಸೇರಿದ ಬೆನ್ನಲ್ಲೇ ವಿಡಿಯೋದಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ವಿವಾದಿತ ವಿಡಿಯೋದಲ್ಲಿರುವ ಅಂಶಗಳ ಬಗ್ಗೆ ಎಫ್ಎಸ್ಎಲ್ ನೀಡಿರುವ ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು. ಗುರುವಾರ ಎಫ್ಎಸ್ಎಲ್ ವರದಿ ಕೈಸೇರಿದ ಕೂಡಲೇ ಪೊಲೀಸರು ಹಾವೇರಿಯಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ವ್ಯಕ್ತಿ ಬೆಂಗಳೂರು ಕೇಂದ್ರ ವಿಭಾಗದ ಎಸಿಪಿಯ ಮುಂದೆ ಶರಣಾಗಿದ್ದಾನೆ. ಬೇರೆ ಜಿಲ್ಲೆಗಳಲ್ಲೂ ಇನ್ನಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಯುವಕರು, ಅಂದು ರಾಜ್ಯಸಭೆ ಸದಸ್ಯರ ಜೊತೆಗೆ ವಿಧಾನಸೌಧ ಪ್ರವೇಶ ಮಾಡಿದ್ದ ಹಲವರನ್ನು ವಶಕ್ಕೆ ಪಡೆದು ಪೊಲೀಸರು ಡ್ರಿಲ್ ಮಾಡಿದ್ದಾರೆ. ಯುವಕರು ತಮ್ಮ ಘೋಷಣೆಯ ಬಗ್ಗೆ ಭಿನ್ನ ಹೇಳಿಕೆ ನೀಡಿದ್ದಾರೆ. ನಾಸೀರ್ ಖಾನ್ ಜಿಂದಾಬಾದ್ ಎಂದಷ್ಟೇ ಕೂಗಿದ್ದು ಎಂದು ಹೇಳಿದ್ದಾರೆ. ಗದ್ದಲದಲ್ಲಿ ನಮಗೇನೂ ಅಂತಹದ್ದು ಕೇಳಿಸಿಯೇ ಇಲ್ಲ ಎಂದೂ ಹೇಳಿದ್ದಾರೆ. ಹೀಗಾಗಿ ಕೂಲಂಕಷ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.
ಫೆ.27ರಂದು ರಾಜ್ಯಸಭೆ ಚುನಾವಣೆ ಗೆಲುವಿನ ಸಂಭ್ರಮದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ಆರೋಪ ಕೇಳಿಬಂದಿದ್ದು, ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪ್ರತಿಪಕ್ಷಗಳ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಘಟನೆ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
Bangalore Four taken to custody over shouting Pakistan Zindabad slogan. A day after supporters of Rajya Sabha winner from Congress, Syed Nasir Hussain, allegedly raised “Pakistan Zindabad” slogans in the corridors of the Vidhana Soudha, the BJP on Wednesday demanded the resignation of Chief Minister Siddaramaiah
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm