ಬ್ರೇಕಿಂಗ್ ನ್ಯೂಸ್
01-03-24 04:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ಕುಂದಲಹಳ್ಳಿಯ ಬ್ರೂಕ್ ಫೀಲ್ಡ್ ನಲ್ಲಿರುವ ಪ್ರಖ್ಯಾತ ರಾಮೇಶ್ವರಂ ಕೆಫೆ ಎನ್ನುವ ಹೊಟೇಲ್ ನಲ್ಲಿ ಮಧ್ಯಾಹ್ನ ಜನಜಂಗುಳಿ ಇದ್ದಾಗಲೇ ಭಾರೀ ಸ್ಫೋಟ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹೊಟೇಲ್ ಸಿಬಂದಿ, ಗ್ರಾಹಕರು ಸೇರಿದ್ದಾರೆ.
ಊಟ ಮಾಡುತ್ತಿದ್ದ ಜಾಗದಲ್ಲಿ ಗ್ರಾಹಕರೊಬ್ಬರು ಹಿಡಿದುಕೊಂಡಿದ್ದ ಬ್ಯಾಗಿನಲ್ಲಿದ್ದ ವಸ್ತು ಸ್ಫೋಟ ಆಗಿದೆ ಎನ್ನುವುದು ಪ್ರಾಥಮಿಕ ಮಾಹಿತಿ. ಆದರೆ, ಬ್ಯಾಗಿನಲ್ಲಿ ಏನಿತ್ತು.. ಅದು ಹೇಗೆ ಸ್ಫೋಟಗೊಂಡಿದೆ ಎಂಬ ಮಾಹಿತಿ ಇಲ್ಲ. ಮಧ್ಯಾಹ್ನ 1 ಗಂಟೆ ಸುಮಾರಿಗೆ ದೊಡ್ಡ ಸದ್ದಿನೊಂದಿಗೆ ಸ್ಫೋಟವಾಗಿದ್ದು, ಭಾರೀ ಹೊಗೆ ಆವರಿಸಿದೆ. ಎಫ್ಎಸ್ಎಲ್ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಯಾವ ಮಾದರಿಯ ಸ್ಫೋಟ ಮತ್ತು ಯಾವುದರಿಂದ ಆಗಿದೆ ಎನ್ನುವುದನ್ನು ಖಚಿತಪಡಿಸಲಿದ್ದಾರೆ.



ಘಟನೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸ್ಫೋಟ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯಕ್ಕೆ ವಿಧಿ ವಿಜ್ಞಾನ ತಂಡದವರು ಪರಿಶೀಲನೆ ನಡೆಸಿದ್ದು, ವರದಿ ಬಂದ ಮೇಲಷ್ಟೇ ಯಾವುದರಿಂದ ಸ್ಫೋಟ ಆಗಿದೆ ಎನ್ನುವುದು ಖಚಿತವಾಗಲಿದೆ. ಸಿಲಿಂಡರ್ ಬ್ಲಾಸ್ಟ್ ಆಗಿದೆಯೇ ಎನ್ನುವ ಶಂಕೆಯೂ ಇದೆ ಎಂದು ತಿಳಿಸಿದ್ದಾರೆ. ಹೆಚ್ಚು ಅಪಾಯಕಾರಿ ಆಗುವ ಗಾಯವಾಗಿಲ್ಲ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಾಂಬ್ ನಿಷ್ಕ್ರಿಯ ದಳ ಆಗಮಿಸಿದ್ದು, ಪೊಲೀಸರು ಸಿಸಿಟಿವಿ ಚೆಕ್ಕಿಂಗ್ ಮಾಡುತ್ತಿದ್ದಾರೆ. ಓಪನ್ ಕೆಫೆಯಾಗಿರುವ ಹೊಟೇಲಿನಲ್ಲಿ ಮಧ್ಯಾಹ್ನ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಇಂಥ ಜಾಗದಲ್ಲೇ ಬ್ಲಾಸ್ಟ್ ಘಟನೆಯಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯಕ್ಕೆ ಆ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ತನಿಖೆ ನಡೆಸುತ್ತಿದ್ದಾರೆ.
Bangalore Rameshwaram Cafe blast, BJP alleges bomb instead of cylinder blast. Five people were injured in an explosion at Bengaluru's popular eatery, The Rameshwaram Cafe, in Whitefield on Friday. The cause is suspected to be an LPG cylinder blast, according to police officials. Forensic experts also arrived at the cafe and are reportedly assessing the exact cause for the blast. Further probe is underway and more details are awaited.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm