ಬ್ರೇಕಿಂಗ್ ನ್ಯೂಸ್
26-11-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 26: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸಿದ್ದ ಸರಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ದ್ವಿಸದಸ್ಯ ಪೀಠ ತಡೆಹಾಕಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ವಾರದ ಹಿಂದಷ್ಟೆ ಅಧಿಕಾರಕ್ಕೇರಿ, ಮೀಸಲು ರದ್ದತಿಯಿಂದ ಉಸಿರು ಕಟ್ಟಿದವರಿಗೆ ಮತ್ತೆ ಉಸಿರು ಸಿಕ್ಕಂತಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿ, ನ.19ರಂದು ಏಕಸದಸ್ಯ ಪೀಠ ಸರಕಾರದ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಅಲ್ಲದೆ, ಈ ಬಗ್ಗೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ರಾಜ್ಯ ಸರಕಾರದ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಸರಕಾರದ ಪರ ವಕೀಲರ ವಾದ ಆಲಿಸಿ ತನ್ನ ಹಳೆಯ ಆದೇಶಕ್ಕೆ ಮತ್ತೆ ತಡೆಹಾಕಿದ್ದಲ್ಲದೆ ಎಲ್ಲ ಪ್ರತಿವಾದಿಗಳಿಗೂ ನೋಟೀಸ್ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಅರ್ಜಿಯಲ್ಲಿನ ತಾಂತ್ರಿಕ ಲೋಪ ಸರಿಪಡಿಸಲು ಸರಕಾರದ ಪರ ವಕೀಲರು ಕೇಳಿಕೊಂಡಿದ್ದು, ಅದನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಚುನಾವಣೆ ನಡೆದು ಎರಡು ವರ್ಷಗಳಾಗುತ್ತಾ ಬಂದರೂ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಾಗಿದೆ. ಇದೀಗ ರಾಜ್ಯದ 276 ಸಂಸ್ಥೆಗಳಲ್ಲಿ ಚುನಾಯಿತರು ಮೀಸಲಾತಿ ಪ್ರಕಾರ ಅಧ್ಯಕ್ಷ – ಉಪಾಧ್ಯಕ್ಷರಾಗಿ ಅಧಿಕಾರಕ್ಕೇರಿದ್ದಾರೆ. ಇಂಥ ಸಂದರ್ಭದಲ್ಲಿ 5-6 ಸಂಸ್ಥೆಗಳಷ್ಟೇ ಮೀಸಲಾತಿ ಪ್ರಶ್ನಿಸಿದ್ದನ್ನು ಪರಿಗಣಿಸಿ ಎಲ್ಲ ಸಂಸ್ಥೆಗಳ ಆಯ್ಕೆಯನ್ನೂ ರದ್ದುಪಡಿಸುವುದು ಸರಿಯಲ್ಲ ಎಂದು ಸರಕಾರದ ಪರ ವಕೀಲರು ವಾದಿಸಿದ್ದಾರೆ.
The High Court has cleared reserving posts of presidents and vice-presidents of all City Municipal Councils, Town Municipal Councils, and Town Panchayats.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm