ಬ್ರೇಕಿಂಗ್ ನ್ಯೂಸ್
01-03-24 11:12 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 01: ದಯವಿಟ್ಟು ವಿಧಾನ ಸೌಧವನ್ನು ಪಾಕಿಸ್ತಾನ ಮಾಡಬೇಡಿ. ಪಾಕಿಸ್ತಾನದವರನ್ನು ಕರೆತಂದು ವಿಧಾನ ಸೌಧವನ್ನು ಉಗ್ರರ ಸ್ಲೀಪರ್ ಸೆಲ್ ಮಾಡಬೇಡಿ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದರೂ ಕ್ರಮ ಕೈಗೊಳ್ಳದೆ ಕೆಲವರನ್ನು ಕರೆಸಿ ವಿಚಾರಣೆ ನಡೆಸಿ ವಾಪಸ್ ಕಳುಹಿಸಿದ್ದಾರೆ. ದೇಶದ್ರೋಹಿಗಳಿಗೆ ಬಿರ್ಯಾನಿ ಕೊಟ್ಟು ಕಳಿಸಿದ್ದೀರಾ.? ಶಿವಾಜಿನಗರ ಬಿರ್ಯಾನಿನಾ.? ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು ಸಾಯಿಸುತ್ತಿತ್ತು ಎಂದು ಹೇಳಿದರು.
ವಿಧಾನಸೌಧದಲ್ಲಿ ಎಮರ್ಜೆನ್ಸಿ ತಂದಿದ್ದಾರೆ. ವಿಪಕ್ಷಗಳು ದೇಶದ್ರೋಹಿಗಳ ಬಂಧನ ಮಾಡಿ ಎಂದು ಧರಣಿ ಮಾಡುತ್ತಿವೆ. ಆದರೆ ಸರ್ಕಾರ ಇದುವರೆಗೂ ಯಾರನ್ನ ಬಂಧನ ಮಾಡಿಲ್ಲ. ನಾವು ಸದನದಲ್ಲಿ ಧರಣಿ ಮಾಡಿದರೂ ಸೆನ್ಸಾರ್ ಹಾಕಿದ್ರು ಎಂದು ವಾಗ್ದಾಳಿ ನಡೆಸಿದರು.
ನಮ್ಮ ಹೋರಾಟ ದೇಶದ ಬದುಕಿಗಾಗಿ. ಪಾಕ್ ಭಯೋತ್ಪಾದಕರ ಗುಂಡಿಗೆ ನಮ್ಮ ಸೈನಿಕರು ಬಲಿಯಾಗುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದ್ರೋಹಿಗಳ ರಕ್ಷಣೆ ನೀಡುವ ಮೂಲಕ ಗಡಿಯಲ್ಲಿ ಹಗಲು ರಾತ್ರಿ ಕಾವಲು ಕಾಯುತ್ತಿರುವ ಸೈನಿಕರಿಗೂ ಅನ್ಯಾಯ ಮಾಡುತ್ತಿದೆ ಎಂದು ಅಶೋಕ್ ಆರೋಪಿಸಿದರು. ಇವರು ಬಂಧನ ಕೂಡಾ ಮಾಡದೇ ರಕ್ಷಣೆ ಮಾಡುತ್ತಿದ್ದಾರೆ ಎಂದು ಅಶೋಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮಾಧ್ಯಮದವರು ನಿರ್ಭೀತಿಯಿಂದ ಕೆಲಸ ಮಾಡುತ್ತಿದ್ದಾರೆ. ಸತ್ಯವನ್ನು ಹೇಳುತ್ತಿದ್ದಾರೆ. ಆದರೆ, ಈಗ ಅವರನ್ನೂ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ವಿಧಾನಸಭೆಯ ಟಿವಿಯಲ್ಲಿ ಕೇವಲ ಆಡಳಿತ ಪಕ್ಷದವರ ವಿಡಿಯೋ ಮಾತ್ರ ತೋರಿಸಲಾಗುತ್ತಿದೆ ಎಂದು ಅಶೋಕ್ ಆರೋಪಿಸಿದರು.
ಮಾಧ್ಯಮದವರಿಂದ ಫೋರ್ಸ್ ಮಾಡಿ ವಿಡಿಯೋ ಪಡೆಯುತ್ತಿದ್ದಾರೆ. ಈಗಾಗಲೇ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಹಿರಿಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈಗಾಗಲೇ FSL ರಿಪೋರ್ಟ್ ಬಂದಿದೆ, ಅದರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿಲ್ಲ ಅಂತ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಅಶೋಕ್ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
R Ashok says dont make Vidhana Soudha Sleeper cell spot, we would have shot those who shouted pak slogans.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm