ಬ್ರೇಕಿಂಗ್ ನ್ಯೂಸ್
02-03-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿಕೆ ಶಿವಕುಮಾರ್ ಅವರೇ ನೀವು ಬ್ರ್ಯಾಂಡ್ ಬೆಂಗಳೂರು ಮಾಡದಿದ್ರೂ ಪರ್ವಾಗಿಲ್ಲ, ಬಾಂಬ್ ಬೆಂಗಳೂರು ಮಾಡಬೇಡಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಇಡೀ ರಾಜ್ಯ ತಲೆ ತಗ್ಗಿಸುವ ಕೆಲಸ ನಡೆದಿದೆ. ನಾನು ದಯವಿಟ್ಟು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡುವೆ, ನೀವು ಬ್ರಾಂಡ್ ಬೆಂಗಳೂರು ಮಾಡದಿದ್ದರೂ ಪರ್ವಾಗಿಲ್ಲ, ಆದ್ರೆ ಬಾಂಬ್ ಬೆಂಗಳೂರು ಮಾಡಬೇಡಿ ಎಂದರು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಮೈ ಬ್ರದರ್ ಅಂದ್ರಿ. ಇದೀಗ ಇನ್ನೊಂದು ಭಯ ನನಗೆ ಆಗ್ತಿದೆ. ಇದೀಗ ಈ ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದವರನ್ನ ಎಲ್ಲಿ ಮೈ ಅಂಕಲ್ ಅಂತೀರಾ ಅಂತ ವ್ಯಂಗ್ಯವಾಗಿ ಟೀಕಿಸಿದರು.
ನಾವೆಲ್ಲಾ ಬೆಂಗಳೂರು ಗೌರವಿಸೋ ಜನ. ನಾನು ಆಡಳಿತ ಪಕ್ಷದ ನಾಯಕರಲ್ಲಿ, ಸದಸ್ಯರಲ್ಲಿ ವಿನಂತಿ ಮಾಡ್ತೀನಿ. ತಮ್ಮ ಮನಸ್ಥಿತಿ ಬದಲು ಮಾಡಿಕೊಳ್ಳಿ. ಈ ಮನಸ್ಥಿತಿಗೆ ಕಾರಣ ಏನು.? ಮಂಗಳೂರು, ಬೀದರ್, ಕಲ್ಬುರ್ಗಿ, ವಿಧಾನಸೌಧದ ವರೆಗೂ ಮಾಡಿದ್ದೀರಿ. ನೀವೇನಾದ್ರೂ ಮಾಡಿ ಆದರೆ, ನಮಗೆ ಓಟ್ ಹಾಕಿ, ನಿಮ್ಮ ರಕ್ಷಣೆ ಮಾಡ್ತೀನಿ ಅನ್ನೋ ನಿಲುವು ಕಾಂಗ್ರೆಸ್ ಪಕ್ಷದ್ದು ಎಂದು ಕಿಡಿಕಾರಿದರು.
ರಾಮೇಶ್ವರ ಕೆಫೆ ಬಳಿ ಇರೋದು ಎಲ್ಲಾ ಅಂತರಾಷ್ಟ್ರೀಯ ಮಟ್ಟದ ಕಂಪನಿಗಳು. ಅರ್ಥ ಮಾಡಿಕೊಳ್ಳಿ ಇದು ಯಾವ ಘಟನೆ ಅಂತ. ಬೆಂಗಳೂರಿಗೆ ಬರುವ ಹೂಡಿಕೆ ಕಡಿಮೆ ಆಗಬೇಕು. ಇಲ್ಲಿರೋ ಕಂಪನಿಗಳಿಗೆ ಭದ್ರತೆ ಇಲ್ಲ ಅನ್ನೋದು ಗೊತ್ತಾಗಬೇಕು ಎಂಬ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಿದರು.
R Ashok slams DCM Dk Shivakumar over Cafe Blast in Bangalore. Says he called the mangalore cooker blast terror as brother and now will he call the rameshwaram cafe blast accused as uncle he ridiculed.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm