ಬ್ರೇಕಿಂಗ್ ನ್ಯೂಸ್
05-03-24 07:09 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.5: ರಾಮೇಶ್ವರ ಕೆಫೆ ಸ್ಫೋಟ ಘಟನೆಯ ತನಿಖೆ ಸವಾಲಾಗಿರುವಾಗಲೇ ರಾಜ್ಯದಲ್ಲಿ ಮತ್ತಷ್ಟು ಬಾಂಬ್ ಸ್ಫೋಟಿಸುವುದಾಗಿ ರಾಜ್ಯ ಸರಕಾರಕ್ಕೆ ಬೆದರಿಕೆ ಇಮೇಲ್ ಬಂದಿದೆ. ಕರ್ನಾಟಕ ಮುಖ್ಯಮಂತ್ರಿ, ಡಿಸಿಎಂ, ಗೃಹ ಸಚಿವ ಮತ್ತು ಬೆಂಗಳೂರು ಪೊಲೀಸ್ ಕಮಿಷನರ್ ಅವರ ಕಚೇರಿಗೆ ಇಮೇಲ್ ಬೆದರಿಕೆ ಬಂದಿರುವುದಾಗಿ ತಿಳಿದುಬಂದಿದೆ.
ಮಾರ್ಚ್ 2ರಂದು ಈ ರೀತಿಯ ಇ-ಮೇಲ್ ಸಂದೇಶ ಬಂದಿದ್ದು, ಮಾರ್ಚ್ 5ರಂದು ವಿಚಾರ ಹೊರಬಂದಿದೆ. ವೈಟ್ ಫೀಲ್ಡ್ ನಲ್ಲಿ ಬಾಂಬ್ ಸ್ಫೋಟದ ಮರುದಿನವೇ ಬೆದರಿಕೆ ಸಂದೇಶ ಬಂದಿದ್ದರೂ ರಾಜ್ಯ ಸರಕಾರ ಅದನ್ನು ಮುಚ್ಚಿಟ್ಟಿತ್ತೇ ಎಂಬ ಪ್ರಶ್ನೆ ಎದುರಾಗಿದೆ. ಇಮೇಲ್ ಬೆದರಿಕೆ ಬಗ್ಗೆ ಸೈಬರ್ ಕ್ರೈಮ್ ಪೊಲೀಸರು ಸುಮೊಟೋ ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇಮೇಲ್ ಸಂದೇಶವನ್ನು ಯಾರು ಕಳಿಸಿದ್ದಾರೆಂದು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ, ಸಾರ್ವಜನಿಕ ಸಾರಿಗೆ, ಕೆಎಸ್ಸಾರ್ಟಿಸಿ ಇತ್ತೀಚೆಗೆ ಬಿಡುಗಡೆ ಮಾಡಿರುವ ಉತ್ಸವ್ ರೀತಿಯ ಐಷಾರಾಮಿ ಬಸ್ಸುಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ವಿಶೇಷ ಅಂದ್ರೆ, ಈ ರೀತಿಯ ಬಾಂಬ್ ದಾಳಿಯನ್ನು ತಪ್ಪಿಸಲು 2.5 ಮಿಲಿಯನ್ ಡಾಲರ್ ಮೊತ್ತವನ್ನು ಪಾವತಿ ಮಾಡುವಂತೆ ಇಮೇಲ್ ಸಂದೇಶ ಹಾಕಿದಾತ ಡಿಮ್ಯಾಂಡ್ ಇಟ್ಟಿದ್ದಾನೆ. ಅಲ್ಲದೆ, ಮುಂದಿನ ದಾಳಿಯ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಲಿದ್ದು, ಸೋಶಿಯಲ್ ಮೀಡಿಯಾದಲ್ಲಿ ನಿರೀಕ್ಷೆಯಲ್ಲಿರುವಂತೆ ಹೇಳಿದ್ದಾನೆ.
ಪೊಲೀಸರು ತನಿಖೆ ನಡೆಸಿದ್ದು, ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ಹೇಳಿದ್ದಾರೆ. ಆದರೆ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟು ಎರಡೇ ದಿನದಲ್ಲಿ ಈ ರೀತಿ ಬೆದರಿಕೆ ಬಂದಿರುವುದು ಸಂಚಲನ ಮೂಡಿಸಿದೆ. ಕೆಫೆ ಹೊಟೇಲಿನಲ್ಲಿ ಬಾಂಬ್ ಇಟ್ಟು ಹೋಗಿರುವಾತನಿಗೆ ಉಗ್ರವಾದಿಗಳ ಕೈವಾಡ ಇದ್ದಿರಬಹುದು ಎಂದು ಈಗಾಗಲೇ ತನಿಖಾ ತಂಡಗಳು ಅಂದಾಜಿಸಿದ್ದು, ಆ ನಿಟ್ಟಿನಲ್ಲಿ ತನಿಖೆ ಕೈಗೊಂಡಿದೆ. ಅದರ ನಡುವಲ್ಲೇ ಅನಾಮಧೇಯ ಇಮೇಲ್ ನಲ್ಲಿ ಮತ್ತಷ್ಟು ಬಾಂಬ್ ಹಾಕುವುದಾಗಿ ರಾಜ್ಯ ಸರಕಾರಕ್ಕೆ ಸವಾಲೊಡ್ಡುವ ರೀತಿ ಬೆದರಿಸಲಾಗಿದೆ.
The Karnataka chief minister, deputy chief minister, home minister and Bengaluru city police commissioner received threat emails on March 2, warning of more attacks. This comes close on the heels of the low-intensity blast at The Rameshwaram Cafe in Brookfield in east Bengaluru on March 1, which left nine injured.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm