ಬ್ರೇಕಿಂಗ್ ನ್ಯೂಸ್
07-03-24 10:27 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ.7: ರಾಮ ದೇವರಲ್ಲ, ಭಾರತ ದೇಶವೇ ಅಲ್ಲ ಎಂಬ ಡಿಎಂಕೆ ಮುಖಂಡ ಎ. ರಾಜಾ ಹೇಳಿಕೆಗೆ ಬಿಜೆಪಿ ಮುಖಂಡ ಸಿ.ಟಿ.ರವಿ ಕಿಡಿಕಾರಿದ್ದಾರೆ. ನಾಯಿ ಕೂಗಿದರೆ ಭೂಲೋಕ ಕೆಟ್ಟು ಹೋಗುತ್ತಾ.. ಇವರು ಭಾರತದ ಜನರ ಶ್ರದ್ಧೆಯನ್ನ ನಾಶ ಮಾಡಬೇಕು ಎಂದು ಬಯಸೋರು. ಹೀಗೇ ಬಯಸೋರೆಲ್ಲಾ ನಾಶವಾಗಿ ಹೋಗಿದ್ದಾರೆ ಎಂದಿದ್ದಾರೆ.
ಎಲ್ಲಿ ನಿನ್ನ ಹರಿ ಎಂದ ಹಿರಣ್ಯ ಕಶ್ಯಪ ಮನೆಯಲ್ಲೇ ಪ್ರಹ್ಲಾದ ಹುಟ್ದ.. ಈ ಎ.ರಾಜನ ಮನೆಯಲ್ಲೇ ರಾಮಭಕ್ತ ಹುಟ್ಟುತ್ತಾನೆ. ತಮಿಳುನಾಡಲ್ಲಿ ಸಾವಿರಾರು ರಾಮನ ದೇವಾಲಯಗಳಿವೆ, ತಾಕತ್ತಿದ್ದರೆ ಮುಟ್ಟಿ ನೋಡಲಿ. ರಾಮೇಶ್ವರ, ರಾಮನೇ ಪೂಜೆ ಮಾಡಿದ ಈಶ್ವರನಿದ್ದಾನೆ. ಇವರಿಗೆ ರಾಮನ ದೇವಾಲಯದ ಹುಂಡಿ ಬೇಕು, ರಾಮ ಬೇಡಾ. ರಾಮನ ದೇವಸ್ಥಾನದ ಮುಂದೆ ಹುಂಡಿ ಇಟ್ಕೊಂಡು ಹಣ ತಿಂತಾರೆ ನಾಚಿಕೆ ಆಗಲ್ವಾ ಇವರಿಗೆ..
ಇಂತವರು ಆಕಾಶಕ್ಕೆ ಉಗಿದು, ಮೈಮೇಲೆ ಬೀಳಿಸಿಕೊಂಡವರಿದ್ದಾರೆ. ರಾಮನನ್ನ ಟೀಕೆ ಮಾಡೋದು ಆಕಾಶಕ್ಕೆ ಉಗಿದಂತೆ, ಅವರ ಮುಖಕ್ಕೆ ಬೀಳೋದು. ಎ.ರಾಜನ ಮನೆಯಲ್ಲೇ ಮತ್ತೆ ರಾಮಭಕ್ತ ಹುಟ್ಟುತ್ತಾನೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಮನದಲ್ಲಿ ಬಹಳ ಭಾವನೆಗಳಿವೆ, ಹೇಳೋಕು ಬಹಳ ಇದೆ, ಸಮಯ ಇದಲ್ಲ. ಸದ್ಯಕ್ಕೆ ರಾಷ್ಟ್ರದ ಹಿತಕ್ಕಾಗಿ ಮೋದಿ 3ನೇ ಬಾರಿ ಪ್ರಧಾನಿ ಆಗಬೇಕು ಅಷ್ಟೆ. ಪಕ್ಷ-ರಾಷ್ಟ್ರದ ಹಿತಕ್ಕಾಗಿ ಬಹಳ ವಿಷಯಗಳನ್ನ ನುಂಗಿಕೊಂಡಿದ್ದೇನೆ. ಬಹಳ ದಿನ ಹೊಟ್ಟೆಯಲ್ಲಿ ಇಟ್ಟುಕೊಳ್ಳಲು ಆಗಲ್ಲ, ಸಮಯ ಬರಲಿ ಎಲ್ಲಾ ಹೇಳ್ತೀನಿ.
ವೈಯಕ್ತಿಕ ನೆಲೆಯಲ್ಲಿ ರಾಜಕಾರಣ ಮಾಡೋದಾದ್ರು ಲೋಕ ಚುನಾವಣೆ ನಂತರವೇ. ಲೋಕಸಭೆ ಚುಣಾವಣೆ ಬಳಿಕ ಯಾರ್ಯಾರು ವಿಧಾನಸಭೆ ಚುನಾವಣೆಯಲ್ಲಿ ಹೇಗೆ ನಡೆದುಕೊಂಡ್ರು ಅಂತ ಹೇಳ್ತೀನಿ. ಲೋಕಸಭೆ ಚುನಾವಣೆ ಬಳಿಕ ಬಹಳ ವಿಷಯ ಹೇಳಲು ಇದೆ, ಹೇಳ್ತೀನಿ, ಹೇಳಲೇಬೇಕು. ಈಗ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಅದೊಂದೇ ಗುರಿ ಇರೋದು. ರಾಜ್ಯದ 28 ಸ್ಥಾನವನ್ನೂ ಬಿಜೆಪಿ ಗೆಲ್ಲಬೇಕು, ಅದಕ್ಕೆ ಅಳಿಲು ಸೇವೆ ಮಾಡೋದಷ್ಟೆ ನಮ್ಮ ಕೆಲಸ ಎಂದು ಸಿ.ಟಿ.ರವಿ ಹೇಳಿದರು.
BJP leader CT Ravi has lashed out at DMK leader A Raja for his remarks that Lord Ram is not God and India is not the country. If a dog calls, the earth will be ruined. They want to destroy the faith of the people of India. All those who want this have been destroyed.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm