ಬ್ರೇಕಿಂಗ್ ನ್ಯೂಸ್
09-03-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.9: ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ಬಂದಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ನವದೆಹಲಿಯಲ್ಲಿ ನಡೆಯಲಿದ್ದು, ಸಭೆಯಲ್ಲಿ ಜೆಡಿಎಸ್ ಸೀಟಿನ ಬಗ್ಗೆ ಮಹತ್ವದ ಚರ್ಚೆಯಾಗಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಅಥವಾ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ಇದಕ್ಕಾಗಿ ಕುಮಾರಸ್ವಾಮಿ ಭಾನುವಾರವೇ ನವದೆಹಲಿಗೆ ತೆರಳಲಿದ್ದಾರೆ. ಜೆಡಿಎಸ್ಗೆ ನಾಲ್ಕು ಕ್ಷೇತ್ರಗಳೆಂಬುದು ಊಹಾಪೋಹ ಮಾತ್ರ. ಜೆಡಿಎಸ್ ಸಿದ್ಧತೆ ಗಮನಿಸಿದರೆ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರಗಳು ಬಹುತೇಕ ಫಿಕ್ಸ್ ಎಂಬಂತಿದೆ.
ಈಗಾಗಲೇ ಈ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕುಮಾರಸ್ವಾಮಿ ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರ ಸರಣಿ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದಾರೆ. ಹೀಗಾಗಿ ಜೆಡಿಎಸ್ಗೆ 3ಕ್ಕಿಂತ ಹೆಚ್ಚು ಸೀಟು ಬಿಟ್ಟುಕೊಡುವ ಸಾಧ್ಯತೆ ಇಲ್ಲ. ಹಾಸನ, ಮಂಡ್ಯ, ಕೋಲಾರ ಬಹುತೇಕ ಖಚಿತವಾಗಿದೆ. ಕುತೂಹಲ ಕೆರಳಿಸಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್. ಮಂಜನಾಥ್ ಅವರನ್ನು ಬಿಜೆಪಿಯಿಂದಲೇ ಕಣಕ್ಕಿಳಿಸಲು ವರಿಷ್ಠರು ಮುಂದಾಗಿದ್ದಾರೆ. ಜೆಡಿಎಸ್ನಲ್ಲೂ ಇದಕ್ಕೆ ಸಮ್ಮತಿ ಇದ್ದು ತಮ್ಮದೇ ಒಬ್ಬರು ಬಿಜೆಪಿಯಲ್ಲಿ ನಿಲ್ಲುವ ಮೂಲಕ ಮತ್ತೊಂದು ಕ್ಷೇತ್ರ ಸಿಕ್ಕಂತೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರು ದೆಹಲಿ ಮೀಟಿಂಗಲ್ಲೂ ಮೂರಕ್ಕಿಂತ ಹೆಚ್ಚು ಸೀಟಿಗಾಗಿ ಚೌಕಾಶಿ ಮಾಡುವುದು ಡೌಟು ಎನ್ನಲಾಗುತ್ತಿದೆ.
The BJP-JD(S) seat-sharing talks for the Lok Sabha elections are in the final stages. The BJP central election committee meeting will be held in New Delhi on Sunday to discuss the JD(S) seat.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm