ಬ್ರೇಕಿಂಗ್ ನ್ಯೂಸ್
12-03-24 03:15 pm HK News Desk ಕರ್ನಾಟಕ
ಮೈಸೂರು, ಮಾ 12: ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪುವ ಆತಂಕದಲ್ಲಿರುವ ಮೈಸೂರು ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೋಮವಾರ ತಡರಾತ್ರಿ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿ, ಕ್ಷೇತ್ರದ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ. ಕೊಡಗಿನ ಜನ ತೋರಿಸಿದ ಪ್ರೀತಿಯನ್ನು ಮರೆಯಲಾರೆ. ನಿಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿದ್ದೀರಿ ಎಂದು ಭಾವುಕರಾದರು.
ಸ್ವಾರ್ಥಕ್ಕಾಗಿ ಯಾರ ಮನೆ ಬಾಗಿಲನ್ನೂ ನಾನು ತಟ್ಟಿಲ್ಲ. ಟಿಕೆಟ್ ಸಿಗುತ್ತೋ, ಸಿಗಲ್ವೋ ಚಾಮುಂಡಿ ನಿರ್ಧರಿಸುತ್ತಾಳೆ. ನನ್ನ ಏಳಿಗೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದ ಸಿಂಹ, 10 ವರ್ಷಗಳ ರಾಜಕಾರಣದ ಬಗ್ಗೆ ಸುದೀರ್ಘ ಮಾತುಗಳನ್ನಾಡಿದರು.
ಮಡಿಕೇರಿಯ ಜನರು ನೇರ ಹಾಗೂ ನಿಷ್ಠುರವಾದಿಗಳು. ಆದರೆ, ಮೈಸೂರು ಜನ ರಾಜಕಾರಣ ಮಾಡುವವರು. ಮೈಸೂರಿನಲ್ಲಿರುವಷ್ಟು ರಾಜಕಾರಣ ಎಲ್ಲಿಯೂ ಇಲ್ಲ. ಜನರ ಮಧ್ಯೆ ಇರುವವರಿಗೆ ಪಕ್ಷ ಟಿಕೆಟ್ ನೀಡಬೇಕು. ನನ್ನಿಂದ ಯಾರು ಸಹ ಸೋತಿಲ್ಲ. ನನ್ನ ವಿರುದ್ಧ ಏಕೆ ಇಲ್ಲಸಲ್ಲದ ಆರೋಪ ಮಾಡುತ್ತೀರಿ? ನನ್ನ ಕ್ಷೇತ್ರದಾಚೆಗೂ ಜನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಈಗಲೂ ಪಕ್ಷ ಟಿಕೆಟ್ ಕೊಡುತ್ತದೆ ಎಂಬ ವಿಶ್ವಾಸವಿದೆ.
ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದೆ. ಪ್ರಧಾನಿ ಮೋದಿ ಇರುವವರೆಗೂ ಇರುತ್ತೇನೆ ಎಂದು ಹೇಳಿದ್ದೆ. ನನ್ನಂಥ ವ್ಯಕ್ತಿಗೆ ಟಿಕೆಟ್ ಕೊಡಬೇಕೆಂದು ನಿರೀಕ್ಷಿಸಿದ್ದೆ. ಆದರೆ, ರಾಜಕಾರಣದಲ್ಲಿ ಏನಾದರೂ ಆಗಬಹುದು. ಮೋದಿಯಂಥ ಮೋದಿಯೇ ಗೌಣವಾಗಿದ್ದರು. ಸೂರ್ಯನಿಗೇ ಗ್ರಹಣ ಬಡಿಯುತ್ತದೆ, ಇನ್ನು ನಾನ್ಯಾರು? ನಾನು ಈಗ ಎಂಪಿ ಆಗಿದ್ದೀನಿ, ಎಂಪಿ ಆಗಿಯೇ ಸಾಯುವುದಿಲ್ಲ. ನನ್ನ ನಸೀಬು ಕೆಟ್ಟು ಏನು ಬೇಕಾದರೂ ಆಗಬಹುದು. 10 ವರ್ಷ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ಪ್ರತಾಪ್ ಸಿಂಹ ಹೇಳಿದರು.
Mysuru Mp Prathap Simha cries out during Facebook live over ticket missing, says thanks to all for your love and support. Can't predict anything in politics he added.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm