ಬ್ರೇಕಿಂಗ್ ನ್ಯೂಸ್
12-03-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12: ರಾಜ್ಯಾದ್ಯಂತ ಏಕಪ್ರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 5, 8 ಮತ್ತು 9ನೇ ತರಗತಿಗೆ ನಡೆಸುತ್ತಿದ್ದ ಪಬ್ಲಿಕ್ ಪರೀಕ್ಷೆಗಳನ್ನು ಮತ್ತೆ ಮುಂದೂಡಲಾಗಿದೆ. ಎರಡು ದಿನಗಳ ಹಿಂದೆ ಹೈಕೋರ್ಟ್ ವಿಭಾಗೀಯ ಪೀಠವು ನೀಡಿದ್ದ ತಡೆಯಾಜ್ಞೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಾ.13ರಿಂದ 16ರ ವರೆಗೆ ಆಯೋಜಿಸಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಪರೀಕ್ಷೆ ರದ್ದುಗೊಳಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಮಾನ್ಯ ಮಾಡಿತ್ತು. ಆದರೆ, ರಾಜ್ಯ ಸರಕಾರ ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಪ್ರಶ್ನಿಸಿ, ಏಕಸದಸ್ಯ ಪೀಠದ ನಿರ್ಧಾರಕ್ಕೆ ತಡೆಯಾಜ್ಞೆ ತಂದಿತ್ತು. ವಿಭಾಗೀಯ ಪೀಠವು ಪರೀಕ್ಷೆಗಳನ್ನು ಎಂದಿನಂತೆ ನಡೆಸುವುದಕ್ಕೆ ಅವಕಾಶ ನೀಡಿತ್ತು. ಅದರಂತೆ, ಸೋಮವಾರದಿಂದ ಪರೀಕ್ಷೆ ನಡೆಸಲಾಗಿತ್ತು.
ಆದರೆ, ಖಾಸಗಿ ಶಾಲಾಡಳಿತ ಒಕ್ಕೂಟವು ತನ್ನ ಪಟ್ಟು ಸಡಿಲಿಸದೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ರದ್ದುಪಡಿಸಿದೆ. ಇದರಿಂದ ಶಾಲಾ ಹಂತದಲ್ಲಿ ಪಬ್ಲಿಕ್ ಪರೀಕ್ಷೆ ನಡೆಯುತ್ತಿರುವಾಗಲೇ ಅರ್ಧಕ್ಕೆ ನಿಂತು ಹೋದಂತಾಗಿದ್ದು, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಉಳಿದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಸುತ್ತೋಲೆ ಹೊರಡಿಸಲಾಗಿದೆ. ಪಬ್ಲಿಕ್ ಪರೀಕ್ಷೆ ನಡೆಯುತ್ತಿದ್ದ ಶಾಲೆಗಳಲ್ಲಿ ಎಂದಿನಂತೆ ಶಾಲಾ ತರಗತಿ ನಡೆಸುವುದಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ರಾಜ್ಯ ಸರಕಾರ ಮತ್ತೆ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಲಿದ್ದು, ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಸ್ವಾಯತ್ತ ಅಧಿಕಾರ ಹೊಂದಿದ್ದೇವೆ ಎಂಬುದನ್ನು ಕೋರ್ಟಿಗೆ ಮನವರಿಕೆ ಮಾಡುವ ಸಾಧ್ಯತೆಯಿದೆ. ಪರೀಕ್ಷೆ ನಡೆಯುತ್ತಿರುವಾಗಲೇ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ವಿದ್ಯಾರ್ಥಿಗಳು ಮತ್ತು ಶಾಲಾಡಳಿತಕ್ಕೆ ಗೊಂದಲಕ್ಕೀಡು ಮಾಡಿದೆ.
The Supreme Court on Tuesday (March 12) put on hold the Board Exams proposed to be held by the Karnataka Government for students of Classes 5, 8 and 9 of the schools affiliated to the State Board.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm