ಬ್ರೇಕಿಂಗ್ ನ್ಯೂಸ್
12-03-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12: ರಾಜ್ಯಾದ್ಯಂತ ಏಕಪ್ರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 5, 8 ಮತ್ತು 9ನೇ ತರಗತಿಗೆ ನಡೆಸುತ್ತಿದ್ದ ಪಬ್ಲಿಕ್ ಪರೀಕ್ಷೆಗಳನ್ನು ಮತ್ತೆ ಮುಂದೂಡಲಾಗಿದೆ. ಎರಡು ದಿನಗಳ ಹಿಂದೆ ಹೈಕೋರ್ಟ್ ವಿಭಾಗೀಯ ಪೀಠವು ನೀಡಿದ್ದ ತಡೆಯಾಜ್ಞೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಾ.13ರಿಂದ 16ರ ವರೆಗೆ ಆಯೋಜಿಸಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಪರೀಕ್ಷೆ ರದ್ದುಗೊಳಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಮಾನ್ಯ ಮಾಡಿತ್ತು. ಆದರೆ, ರಾಜ್ಯ ಸರಕಾರ ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಪ್ರಶ್ನಿಸಿ, ಏಕಸದಸ್ಯ ಪೀಠದ ನಿರ್ಧಾರಕ್ಕೆ ತಡೆಯಾಜ್ಞೆ ತಂದಿತ್ತು. ವಿಭಾಗೀಯ ಪೀಠವು ಪರೀಕ್ಷೆಗಳನ್ನು ಎಂದಿನಂತೆ ನಡೆಸುವುದಕ್ಕೆ ಅವಕಾಶ ನೀಡಿತ್ತು. ಅದರಂತೆ, ಸೋಮವಾರದಿಂದ ಪರೀಕ್ಷೆ ನಡೆಸಲಾಗಿತ್ತು.
ಆದರೆ, ಖಾಸಗಿ ಶಾಲಾಡಳಿತ ಒಕ್ಕೂಟವು ತನ್ನ ಪಟ್ಟು ಸಡಿಲಿಸದೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ರದ್ದುಪಡಿಸಿದೆ. ಇದರಿಂದ ಶಾಲಾ ಹಂತದಲ್ಲಿ ಪಬ್ಲಿಕ್ ಪರೀಕ್ಷೆ ನಡೆಯುತ್ತಿರುವಾಗಲೇ ಅರ್ಧಕ್ಕೆ ನಿಂತು ಹೋದಂತಾಗಿದ್ದು, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಉಳಿದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಸುತ್ತೋಲೆ ಹೊರಡಿಸಲಾಗಿದೆ. ಪಬ್ಲಿಕ್ ಪರೀಕ್ಷೆ ನಡೆಯುತ್ತಿದ್ದ ಶಾಲೆಗಳಲ್ಲಿ ಎಂದಿನಂತೆ ಶಾಲಾ ತರಗತಿ ನಡೆಸುವುದಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ರಾಜ್ಯ ಸರಕಾರ ಮತ್ತೆ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಲಿದ್ದು, ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಸ್ವಾಯತ್ತ ಅಧಿಕಾರ ಹೊಂದಿದ್ದೇವೆ ಎಂಬುದನ್ನು ಕೋರ್ಟಿಗೆ ಮನವರಿಕೆ ಮಾಡುವ ಸಾಧ್ಯತೆಯಿದೆ. ಪರೀಕ್ಷೆ ನಡೆಯುತ್ತಿರುವಾಗಲೇ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ವಿದ್ಯಾರ್ಥಿಗಳು ಮತ್ತು ಶಾಲಾಡಳಿತಕ್ಕೆ ಗೊಂದಲಕ್ಕೀಡು ಮಾಡಿದೆ.
The Supreme Court on Tuesday (March 12) put on hold the Board Exams proposed to be held by the Karnataka Government for students of Classes 5, 8 and 9 of the schools affiliated to the State Board.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm