ಬ್ರೇಕಿಂಗ್ ನ್ಯೂಸ್
13-03-24 06:38 pm HK News Desk ಕರ್ನಾಟಕ
ರಾಮನಗರ, ಮಾ 13: “ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ. ಮಂಜುನಾಥ್ ಅವರು ರಾಜಕೀಯವಾಗಿ ಅಮಾಯಕರು. ಅವರು ಒಳ್ಳೇ ಡಾಕ್ಟರ್ ಆಗಿರುವಂಥವರು. ರಾಜಕೀಯ ಅವರಿಗೆ ಒಗ್ಗುವಂಥದ್ದಲ್ಲ. ಅಂಥ ಅಮಾಯಕರನ್ನು ಚುನಾವಣೆಗೆ ಎಳೆದು ತಂದು, ರಾಮನಗರದಲ್ಲಿ ಡಿಕೆ ಸುರೇಶ್ ವಿರುದ್ಧ ನಿಲ್ಲಿಸುವ ಮೂಲಕ ಜೆಡಿಎಸ್ ನವರು ಅವರನ್ನು ಬಲಿಪಶು ಮಾಡುತ್ತಿದ್ದಾರೆ’’ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಇದೇ ವೇಳೆ, ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿಯವರಿಗೆ ಸವಾಲು ಹಾಕಿದ ಅವರು, “ಡಿಕೆ ಸುರೇಶ್ ವಿರುದ್ಧ ನಿಲ್ಲೋಕೆ ಎರಡು ಬಾರಿ ಸಿಎಂ ಆಗಿದ್ದ ನಿಮಗೆ ತಾಕತ್ತಿಲ್ಲವಾ’’ ಎಂದು ಪ್ರಶ್ನಿಸಿದ್ದಾರೆ. “ಹೆಚ್ಡಿಕೆಗೆ ತಾಕತಿಲ್ವಾ., ನಿಮಗೆ ಗಂಡಸ್ತನ ಇಲ್ವಾ.!?ಎರಡು ಬಾರಿ ಸಿಎಂ ಆದವ್ರು, ಮಾಜಿ ಸಿಎಂಗೆ ನಿಲ್ಲೋ ತಾಕತಿಲ್ವಾ.?’’ ಎಂದು ಕೇಳಿರುವ ಅವರು, “ಅಶ್ವತ್ಥ್ ನಾರಾಯಣ್ ಅವರು ಹಿಂದೆ ಇಲ್ಲಿ ಉಸ್ತುವಾರಿ ಮಂತ್ರಿ ಆಗ್ರಿದಲ್ಲ ಅವರನ್ನ, ನಿಲ್ಲಿಸಬಹದಿತ್ತಲ್ವಾ.? ಅಷ್ಟೆಲ್ಲಾ ಯಾಕೆ ಸಿ.ಪಿ.ಯೋಗೇಶ್ವರ್ ಅವರೇ ನಿಲ್ಲಬಹುದಿತ್ತಲ್ಲವಾ’’ ಎಂದು ಪ್ರಶ್ನಿಸಿದ್ದಾರೆ.
ಪಾಪ… ಡಿ.ಕೆ.ಸುರೇಶ್ ವಿರುದ್ಧ ಮಂಜುನಾಥ್ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ. ಡಿ ಕೆ ಸುರೇಶ್ ವಿರುದ್ಧ ನಿಮಗೆ ಅಭ್ಯರ್ಥಿ ಇಲ್ಲ ಅನ್ನೋದು ಗೊತ್ತಾಗ್ತಿದೆ ಎಂದು ಹುಸೇನ್ ಕಿಡಿಕಾರಿದ್ದಾರೆ. ಇದೇ ವೇಳೆ, ಎಚ್ಡಿಕೆಯವರ ಕಿರಾತಕರನ್ನ ಸೋಲಿಸಬೇಕು ಎಂಬ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ನಿಮ್ಮನ್ನು ಕಾಂಗ್ರೆಸ್ಸಿನವರು ಮುಖ್ಯಮಂತ್ರಿ ಮಾಡಿದಾಗ ಕಾಂಗ್ರೆಸ್ಸಿನವರು ಕಿರಾತಕರಾಗಿರಲಿಲ್ಲವಾ.? ಎಂದು ಕೇಳಿರುವ ಅವರು, ಈಗ ಒಬ್ಬ ಮುಸ್ಲಿಂ ವ್ಯಕ್ತಿಯಲ್ಲಿ ಗೆಲ್ಲಿಸಿದಕ್ಕೆ ಅವರು ಕಿರಾತಕರಾದ್ರಾ.? ಆ ಪದ ನಿಮಗೆ ಅನ್ವಯಿಸುತ್ತದೆ, ನೀವು ಕಿರಾತಕರು. ಹೆಚ್ಡಿಕೆ ಸೋಲಿನ ಹತಾಶೆಯಲ್ಲಿ ಹೀಗೆ ಮಾತನಾಡ್ತಿದ್ದಾರೆ’’ ಎಂದು ಹೇಳಿದ್ದಾರೆ.
Mla Iqbal Hussain slams Jds Kumaraswamy of making Dr Manjunath contest against DK Suresh, says does Kumaraswamy have no guts t stand against DK Suresh ?
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm