ಬ್ರೇಕಿಂಗ್ ನ್ಯೂಸ್
14-03-24 10:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕೆ.ಇ. ಕಾಂತೇಶ್ಗೆ ಟಿಕೆಟ್ ತಪ್ಪಿದ್ದರಿಂದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕೆರಳಿ ಕೆಂಡವಾಗಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್, ಈಶ್ವರಪ್ಪ ಕೋಪ ಶಮನಕ್ಕೆ ಮುಂದಾಗಿದೆ. ಇದೇ ವೇಳೆ ಮಾಧ್ಯಮದಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕಾಂತೇಶ್ ಅವರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡುವ ಸುಳಿವನ್ನು ನೀಡಿದ್ದಾರೆ.
ಟಿಕೆಟ್ ವಂಚಿತ ನಾಯಕರಾದ ಡಿವಿ ಸದಾನಂದಗೌಡ, ಸಿಟಿ ರವಿ ಅವರು ಬೆಂಗಳೂರಿನಲ್ಲಿ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಚರ್ಚೆಗೆ ಗ್ರಾಸವಾಗಿದೆ. ಇದಲ್ಲದೆ, ಈಶ್ವರಪ್ಪ ತನ್ನ ಬೆಂಬಲಿಗರ ಜೊತೆಗೆ ಚರ್ಚಿಸಿ ಮುಂದಿನ ತೀರ್ಮಾನ ಎಂದಿರುವುದು ಕುತೂಹಲ ಮೂಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ಟಿಕೆಟ್ ವಿಷಯ ಈಗ ಮುಗಿದ ಕಥೆ. ಮುಂದೆ ಏನಾಗಬೇಕು ನೋಡೋಣ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಕೈಬಲಪಡಿಸೋಣ. ಈಶ್ವರಪ್ಪ ಜೊತೆಗಿನ ಮಾತುಕತೆಯನ್ನ ವರಿಷ್ಠರ ಗಮನಕ್ಕೆ ತರುತ್ತೇನೆ. ಈಶ್ವರಪ್ಪರನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದರು.
ಟಿಕೆಟ್ ಕೊಡುವ ವಿಚಾರದಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ನುಡಿದಂತೆ ನಡೆದುಕೊಳ್ಳಲಿಲ್ಲ ಎಂದು ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಈಶ್ವರಪ್ಪ ಅವರ ಜತೆ ಮಾತನಾಡುತ್ತೇನೆ. ಅಲ್ಲದೆ, ಹೈಕಮಾಂಡ್ ನಾಯಕರು ಸಹ ಮಾತನಾಡಲಿದ್ದಾರೆ. ಅವರ ಮಗನನ್ನು ಎಂಎಲ್ಸಿ ಮಾಡಲಿದ್ದಾರೆ ಎಂದು ಹೇಳಿದರು. ಈ ಮೂಲಕ ಕಾಂತೇಶ್ಗೆ ಎಂಎಲ್ಸಿ ಮಾಡುವ ಸುಳಿವನ್ನು ಯಡಿಯೂರಪ್ಪ ನೀಡಿದ್ದಾರೆ.
Eshwarappa angry after son doesnt get Loksabha ticket for Haveri, eshwarappa slams B. S. Yediyurappa. BJP leaders have arrived at his residence for peace meeting. Miffed after his son was denied a ticket for the Haveri-Gadag Lok Sabha seat, senior BJP leader KS Eshwarappa on Wednesday laid the blame on former chief minister and Lingayat stalwart BS Yediyurappa.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm