ಬ್ರೇಕಿಂಗ್ ನ್ಯೂಸ್
15-03-24 04:44 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 15: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜ್ ಮುನೀರ್ ಎಂಬಾತನನ್ನು ಎನ್ಐಎ ಅಧಿಕಾರಿಗಳು 7 ದಿನಗಳ ಕಾಲ ಬುಧವಾರ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಯಾದ ಮಾಜ್ ಮುನೀರ್ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ.
ಈತ ಶಿವಮೊಗ್ಗದ ತೀರ್ಥಹಳ್ಳಿ ಮೂಲದವನಾಗಿದ್ದು, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿದ್ದ. ಇದೀಗ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರಾಮೇಶ್ವರಂ ಕೆೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ ಬಳ್ಳಾರಿ ಮಾಡ್ಯೂಲ್ಗೂ ಸಾಮ್ಯತೆ ಇರುವುದು ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಇದಕ್ಕೂ ಮುನ್ನ ಕಳೆದ ವರ್ಷ ಡಿಸೆಂಬರ್ 17 ರಂದು ಬಳ್ಳಾರಿ ಮಾಡ್ಯೂಲ್ (ಬಳ್ಳಾರಿಯನ್ನು ಕೇಂದ್ರವನ್ನಾಗಿಸಿಕೊಂಡು ಕೃತ್ಯ) ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಬಳ್ಳಾರಿ ಮೂಲದ ಮಿನಾಜ್ ಅಲಿಯಾಸ್ ಎಂ.ಡಿ ಸುಲೇಮಾನ್, ಸೈಯದ್ ಸಮೀರ್ ಮತ್ತು ಮಹಾರಾಷ್ಟ್ರದ ಮುಂಬೈನಲ್ಲಿ ಅನಾಸ್ ಇಕ್ಬಾಲ್ ಶೇಕ್, ದೆಹಲಿಯಲ್ಲಿ ಶಯಾನ್ ರೆಹಮಾನ್ ಅಲಿಯಾಸ್ ಹುಸೇನ್ನನ್ನು ಎರಡು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು.
2023ರ ಡಿ. 17ರಂದು ರಾಜ್ಯ ಸೇರಿ ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ಐಸಿಸ್) ಉಗ್ರ ಸಂಘಟನೆಗಳು ಸಂಚು ರೂಪಿಸಿದ್ದ ಮಾಹಿತಿ ಸಂಗ್ರಹಿಸಿದ್ದ ರಾಷ್ಟ್ರೀಯ ತನಿಖಾ ದಳ(ಎನ್ಐಎ), ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಪ್ರಕರಣವನ್ನು ಬಯಲಿಗೆ ಎಳೆದಿತ್ತು. ಈ ವೇಳೆ, ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ 7 ಮಂದಿಯನ್ನು ಬಂಧಿಸಲಾಗಿತ್ತು.
The National Investigation Agency (NIA) on Wednesday took into custody maj Muneer for seven days in connection with the Rameswaram café blast case. Maj Muneer, the main accused in the Shivamogga trial blast case, was lodged in Parappana Agrahara jail.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm