ಬ್ರೇಕಿಂಗ್ ನ್ಯೂಸ್
17-03-24 02:05 pm HK News Desk ಕರ್ನಾಟಕ
ಶಿವಮೊಗ್ಗ, ಮಾ.17: ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಪಿ ಕಪಿಮುಷ್ಟಿಯಿಂದ ತಪ್ಪಿಸಲು ಸ್ಪರ್ಧೆ ಮಾಡುತ್ತಿದ್ದೇನೆ. ನೊಂದ ಕಾರ್ಯಕರ್ತರ ಧ್ವನಿಯಾಗಿ ನಾನು ಚುನಾವಣೆ ಸ್ಪರ್ಧಿಸುತ್ತೇನೆ. ಯಾರೇ ಬಂದು ಹೇಳಿದರೂ ನಾನು ಚುನಾವಣೆ ಎದುರಿಸುತ್ತೇನೆ.
ಯಡಿಯೂರಪ್ಪ ಹಾಗೂ ಅವರ ಮಕ್ಕಳಿನಿಂದ ಪಕ್ಷ ಮುಕ್ತವಾಗಬೇಕು. ಹಾಗಾಗಿ ಚುನಾವಣೆ ಸ್ಪರ್ಧೆ ಮಾಡ್ತೀನಿ. ಯಡಿಯೂರಪ್ಪ ನೇತೃತ್ವದಲ್ಲಿ ತುಂಬಾ ಸೀಟು ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ. ಬಿಜೆಪಿಯಲ್ಲಿ ಆಗುತ್ತಿರುವ ಕೆಟ್ಟ ರಾಜಕಾರಣ ಕೇಂದ್ರದ ನಾಯಕರಿಗೆ ಗೊತ್ತಾಗಬೇಕು ಎಂದರು.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ನನ್ನ ದೇವರು. ಪ್ರಾಣ ಹೋದರೂ ಮೋದಿ ಬಿಡಲಿಲ್ಲ. ಆದರೆ ನಾನು ರಾಘವೇಂದ್ರ ವಿರುದ್ಧ ಸ್ಪರ್ಧೆ ಮಾಡುತ್ತಿರುವುದು. ಹಾಗಾಗಿ ನಾಳೆಯ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಗೆದ್ದ ಮೇಲೆ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ನಾಳೆ ಅವರನ್ನು ಭೇಟಿ ಮಾಡಲ್ಲ. ಚುನಾವಣೆ ಮಾಡುತ್ತಿದ್ದೇನೆ. ಹಾಗಾಗಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದರು.
ಮೊನ್ನೆ ಶಿವಮೊಗ್ಗದಲ್ಲಿ ನಮ್ಮ ಕಾರ್ಯಕರ್ತರ ಸಭೆ ಮಾಡಿ ಅಭಿಪ್ರಾಯ ಪಡೆದೆ. ಸಭೆ ಅಷ್ಟು ಅದ್ದೂರಿಯಾಗಿ ನಡೆಯುತ್ತದೆ ಎಂದುಕೊಂಡಿರಲಿಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆಂದು ಘೋಷಣೆ ಮಾಡಿದ್ದೇನೆ. ಚುನಾವಣೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದರು.

ಆರಗ ಜ್ಞಾನೇಂದ್ರ ಅವರು ಬಂದಿದ್ದರು. ಯಾಕೆ ನಾನು ಸ್ಪರ್ಧೆ ಮಾಡುತ್ತಿದ್ದೇನೆಂದು ಅವರಿಗೆ ತಿಳಿಸಿದ್ದೇನೆ. ಹಿಂದುತ್ವವಾದಿಗಳಿಗೆ ಮೋಸವಾಗಿದೆ. ಟಿಕೆಟ್ ತಪ್ಪಿಸುವ ಕೆಲಸವಾಗಿದೆ. ಯಡಿಯೂರಪ್ಪನವರ ಕುಟುಂಬದ ಕೈಯಲ್ಲಿ ಪಾರ್ಟಿ ಸಿಲುಕಿಕೊಂಡಿದೆ. ಯಡಿಯೂರಪ್ಪ ಹೇಳಿದ ಹಾಗೆ ವರಿಷ್ಠರು ಕೇಳುತ್ತಾರೆ. ಯಡಿಯೂರಪ್ಪ ಕೆಜೆಪಿ ಕಟ್ಟಿದ್ದಾಗ ಗೆದ್ದಿದ್ದು ಆರು ಸೀಟು. ಯಡಿಯೂರಪ್ಪ ದೊಡ್ಡ ನಾಯಕನೆಂದು ಕೇಂದ್ರದ ನಾಯಕರು ಎಂದುಕೊಂಡಿದ್ದಾರೆ. ಯತ್ನಾಳ್ ಗೆ ಯಾಕೆ ರಾಜ್ಯಾಧ್ಯಕ್ಷರನ್ನಾಗಿ ಮಾಡಲಿಲ್ಲ. ಇನ್ನೊಬ್ಬ ಲಿಂಗಾಯತ ನಾಯಕ ಬೆಳೆಯಲು ಇವರಿಗೆ ಇಷ್ಟವಿಲ್ಲ. ಸಿ.ಟಿ.ರವಿ ಸಚಿವ ಸ್ಥಾನ ಬಿಟ್ಟು ಪಕ್ಷ ಸಂಘಟಿಸಿದರು. ಅವರನ್ನು ಬೇಕಾದರೂ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕಿತ್ತು. ಸಿ.ಟಿ.ರವಿ ಯಾವುದರಲ್ಲಿ ಕಡಿಮೆ ಇದ್ದರು? ಲಿಂಗಾಯತರು ಬೇಡ ಒಕ್ಕಲಿಗರು ಬೇಡ ಕೊನೆಯ ಪಕ್ಷ ನನ್ನನ್ನು ಯಾಕೆ ರಾಜ್ಯಾಧ್ಯಕ್ಷ ಮಾಡಲಿಲ್ಲ. ಪಕ್ಷ ಹೇಳಿದ ಹಾಗೆ ನಾನು ಇಲ್ಲಿಯವರೆಗೆ ಕೇಳಿದ್ದೇನೆ ಎಂದು ಈಶ್ವರಪ್ಪ ಹೇಳಿದರು.
Eshwarappa slams Yediyurappa says BJP should be far way from both father and son. Central leaders have taught that
Yediyurappa is the top leader in state.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm