ಬ್ರೇಕಿಂಗ್ ನ್ಯೂಸ್
18-03-24 06:11 pm Bangalore Correspondent ಕರ್ನಾಟಕ
ಮೈಸೂರು, ಮಾ.18: 2014 ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂಥಾ ಹೈ ಕಮಂಡ್ ಹೇಳಿರಲಿಲ್ಲ. ನಾನು ಯಾಕೆ ಕೊಟ್ರಿ ಎಂದು ಕೇಳಿರಲಿಲ್ಲ. ಈಗಲೂ ಅಷ್ಟೇ ಯಾಕೆ ತಪ್ಪಿಸಿದ್ದೀರಿ ಅಂಥಾ ನಾನು ಕೇಳಿಯೂ ಇಲ್ಲ, ಅವರು ಹೇಳಿಯೂ ಇಲ್ಲ. ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ, ಪಕ್ಕದಲ್ಲಿರುವವರಿಗು ದ್ರೋಹ ಮಾಡಲ್ಲ.'
ಇದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಸ್ಪಷ್ಟನುಡಿ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ನಡೆದ ಮಾಧ್ಯಮ ಸಂವಾದದಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜೊತಗೆ ಭಾಗಿಯಾದ ಅವರು ಈ ಹಿಂದೆ ಹೇಳಿದಂತೆಯೇ ಯದುವೀರ್ ಅವರಿಗೆ ಸಂಪೂರ್ಣ ಬೆಂಬಲ ಘೋಷಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದರು. ಈ ಮೂಲಕ ತನಗೆ ಟಿಕೆಟ್ ಕೈತಪ್ಪಿದರೂ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಿಳಿದಿದ್ದು ಅಖಾಡ ರಂಗೇರಿದೆ.



ಯದುವೀರ್ ಅವರನ್ನು ಪಕ್ಷ ಅಭ್ಯರ್ಥಿ ಮಾಡಿದೆ. ನಾವು ನಾಮಪತ್ರ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ರಾಜರಾಗಿ ನಾಡಿಗೆ ಪರಿಚಯ ಆಗಿದ್ದರೂ ಅಭ್ಯರ್ಥಿಯಾಗಿ ಮನವರಿಕೆ ಮಾಡಿಕೊಡಬೇಕು. ಇದು ತುಂಬಾ ದೊಡ್ಡ ಕ್ಷೇತ್ರ. ಕಡಕೊಳದಿಂದ ಕರ್ಕಿ 200 ಕಿ.ಮೀ. ಹೋಗಬೇಕು. ಜನರನ್ನು ತಲುಪಲು ಮಾಧ್ಯಮ ಮಾಖ್ಯ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಪಕ್ಷದಿಂದ ಆಫರ್ ಇತ್ತು ಇಲ್ವಾ ಎಂಬ ಯಾವ ಪ್ರಶ್ನೆಗಳು ಈಗ ಪ್ರಸ್ತುತ ಅಲ್ಲ. ನಮಗೆ ಯದುವೀರ್ ಅವರನ್ನು ಗೆಲ್ಲಿಸುವುದಷ್ಟೇ ಈಗ ಮುಖ್ಯ. ದೇಶಕ್ಕೆ ಮೋದಿ ಬೇಕು, ಮೋದಿ ಪರವಾಗಿ ಕೈ ಎತ್ತಲು ಮೈಸೂರಿನಿಂದ ಒಬ್ಬ ವ್ಯಕ್ತಿ ಬೇಕು. ಇದಷ್ಟೇ ನಮಗೆ ಮುಖ್ಯ. ಪಕ್ಷ ನನಗೆ ತಾಯಿ ಇದ್ದಂಗೆ. ಇದು ಬರಿ ಬಾಯಿ ಮಾತಲ್ಲ. ಇದು ನನ್ನ ಮನಸಿನ ಮಾತು ಎಂದು ಹೇಳಿದರು.
Mysuru Prathap Simha bats for Yaduveer, says won't leave BJP Party. Says party is like my mother. Will work for the victory of our new candidate Yaduveer.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm