ಬ್ರೇಕಿಂಗ್ ನ್ಯೂಸ್
19-03-24 12:09 pm HK News Desk ಕರ್ನಾಟಕ
ಹುಬ್ಬಳ್ಳಿ , ಮಾ 18: ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇತ್ತೀಚೆಗೆ ಪ್ರಬಲ ಮೋದಿ ಟೀಕಾಕಾರನಾಗಿ ಬದಲಾಗಿದ್ದಾರೆ. ತುಂಬ ಅಧ್ಯಯನ ಮಾಡಿ, ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಚರ್ಚೆಗಳಲ್ಲಿ, ಸಭೆಗಳಲ್ಲಿ, ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಮೋದಿ ಅವರನ್ನು ಟೀಕಿಸುತ್ತಿದ್ದಾರೆ. ಹಾಗಿದ್ದರೆ ಸಂತೋಷ್ ಲಾಡ್ ಒಮ್ಮಿಂದೊಮ್ಮೆಗೆ ಹೀಗೆ ಪ್ರಖರ ಟೀಕಾಕಾರನಾಗಿ ಬದಲಾಗಿದ್ದು ಹೇಗೆ? ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಸ್ಪಷ್ಟ ಉತ್ತರ ಸಿಕ್ಕಿದೆಯಂತೆ !
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಹ್ಲಾದ್ ಜೋಶಿ ಅವರು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸಂತೋಷ್ ಲಾಡ್ ಬೈಗುಳದ ರಹಸ್ಯ ತೆರೆದಿಟ್ಟಿದ್ದಾರೆ.
ಸಂತೋಷ್ ಲಾಡ್ ಅವರು ಇತ್ತೀಚೆಗೆ ನನ್ನನ್ನು ಮತ್ತು ಮೋದಿಯವರನ್ನು ನಿರಂತರವಾಗಿ ಬಯ್ಯುತ್ತಿದ್ದಾರೆ, ಟೀಕೆ ಮಾಡುತ್ತಿದ್ದಾರೆ. ಅವರು ಈ ರೀತಿಯ ಟೀಕೆ ಮಾಡುತ್ತಿರುವುದು ತಮ್ಮ ಸಚಿವ ಪದವಿ ಉಳಿಸಿಕೊಳ್ಳಲು. ಇದನ್ನು ಸ್ವತಃ ಅವರೇ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ಜೋಶಿ ಹೇಳಿದರು.
ನಾನು ಮತ್ತು ಲಾಡ್ ಆಗಾಗ ಫ್ಲೈಟ್ನಲ್ಲಿ ಸಿಗ್ತಾ ಇರುತ್ತೇವೆ. ದಿಲ್ಲಿಯಿಂದ ಬರುವಾಗ, ಬೆಂಗಳೂರಿನಿಂದ ಬರುವಾಗ ಸಿಗುತ್ತೇವೆ. ಮಾತಾಡಿಕೊಳ್ತೇವೆ. ಒಂದು ದಿನ ನಾನು ಕೇಳಿದೆ. ನೀವು ನನ್ನ ಮೇಲೆ ನಿರಂತರವಾಗಿ ಟೀಕೆ ಮಾಡ್ತಾ ಇರ್ತೀರಿ. ಅದೇನೂ ತೊಂದರೆ ಇಲ್ಲ. ನಾನು ಸಣ್ಣವನು. ಆದರೆ, ಮೋದಿ ಅವರ ಮೇಲೂ ದಾಳಿ ಮಾಡ್ತೀರಲ್ಲಾ, ನಿಮ್ಮ ಪರಿಸ್ಥಿತಿ ಏನು? ಎಂದು ಕೇಳಿದೆ.
ನಾನು ಮತ್ತು ಸಂತೋಷ್ ಲಾಡ್ ಹಿಂದಿಯಲ್ಲಿ ಮಾತಾಡೋದು ಜಾಸ್ತಿ. ಅವರು ಹಿಂದಿಯಲ್ಲಿ ಹೇಳಿದರು: ಕ್ಯಾ ಕರೂ ಸಾಬ್, ಊಪರ್ ಸೇ ಇನ್ಸ್ಟ್ರಕ್ಷನ್ ಹೈ, ಮೈ ಡೈಲಿ ಗಾಲಿ ನಹೀ ದಿಯಾ ತೋ ನೌಕರಿ ಚಲೀ ಜಾತೀ ಹೈ! (ಏನು ಮಾಡಲಿ ಸಾಹೇಬ್ರೆ.. ಮೇಲಿನಿಂದ ನನಗೆ ಸೂಚನೆ ಇದೆ. ದಿನಾ ಬಯ್ಯದೆ ಹೋದರೆ ನನ್ನ ಕೆಲಸವೇ ಹೋಗಿ ಬಿಡ್ತದೆ) ಎಂದು ಹೇಳಿದೆ.
ಆಗಿಂದ ನಾನು ತಲೆ ಕೆಡಿಸಿಕೊಂಡಿಲ್ಲ, ನೀವು ತಲೆ ಕೆಡಿಸಿಕೊಳ್ಳಬೇಡಿ. ಉತ್ತರ ಕೊಡುವಾಗ ಕೊಡ್ತೀನಿ ಎಂದು ಜೋಶಿಯವರು ಸಭೆಯಲ್ಲಿ ಹೇಳುವ ವಿಡಿಯೊ ಈಗ ಎಲ್ಲೆಡೆ ವೈರಲ್ ಆಗಿದೆ.
Santosh lad says no option need to shout at Modi always have instructions, Pralhad Joshi reveals flight conversation.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm