ಬ್ರೇಕಿಂಗ್ ನ್ಯೂಸ್
20-03-24 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತೀವ್ರ ತಲೆ ನೋವು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ತುರ್ತು ಮೆದಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಮಾರ್ಚ್ 20 ಬೆಳಿಗ್ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಸದ್ಗುರು ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಶಿವರಾತ್ರಿ ಉತ್ಸವದ ಕಳೆದ ಕೆಲ ದಿನಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಆಸ್ಪತ್ರೆ ವೈದ್ಯರ ಸಂಪರ್ಕ ಮಾಡಿದ್ದರು. ಆದರೆ, ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಹಿಂದೇಟು ಹಾಕಿದ್ದರು. ಆ ಬಳಿಕ ಎಡಗಾಲು ಸೆಳೆತ ಸೇರಿದಂತೆ ತಲೆ ನೋವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನೆಲೆ ಸಿಟಿ ಮತ್ತು ಎಂಐಆರ್ ಸ್ಕ್ಯಾನ್ ಮಾಡಿದಾಗ ಮೆದಳಿನಲ್ಲಿ ರಕ್ತ ಸ್ರಾವವಾಗಿದೆ ಜೊತೆಗೆ ಮೆದುಳಿನಲ್ಲಿ ಊತವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆ ದಾಖಲಾದ ಸದ್ಗುರುವಿನ ತಪಾಸಣೆ ನಡೆಸಿದ ವೈದ್ಯರು ತುರ್ತು ಮೆದುಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ

ಸದ್ಗುರುಗಳಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿಗಳು ಟ್ವೀಟ್ ಮಾಡಿದ್ದು, " ಸದ್ಗುರುಗಳ ಜತೆ ಕರೆ ಮಾಡಿ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ " ಎಂದಿದ್ದಾರೆ.
ಇನ್ನು ಸದ್ಗುರು ಆಸ್ಪತ್ರೆ ದಾಖಲು ಮಾಹಿತಿ ಹೊರಬೀಳುತ್ತಿದ್ದಂತೆ ದೇಶ ವಿದೇಶದಲ್ಲಿರುವ ಸದ್ಗುರು ಅನುಯಾಯಿಗಳು, ಶಿಷ್ಯರು, ಬೆಂಬಲಿಗರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
Sadhguru Jaggi Vasudev underwent surgery at a Delhi hospital for a life-threatening brain bleed, his Isha Foundation said in a statement. He is recovering well, and improving "beyond expectations", it added.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm