ಬ್ರೇಕಿಂಗ್ ನ್ಯೂಸ್
20-03-24 10:39 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.20: ತಮಿಳು ಭಾಷಿಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ, ಕರ್ನಾಟಕದ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾಗೆ ಪತ್ರ ಬರೆದಿರುವ ಕೇಂದ್ರ ಚುನಾವಣಾ ಆಯೋಗ, ಶೋಭಾ ವಿರುದ್ಧ ಕ್ರಮಕ್ಕೆ ಸೂಚಿಸಿದೆ. ತಮಿಳುನಾಡಿನ ಡಿಎಂಕೆ ಕಾರ್ಯದರ್ಶಿ ಆರ್.ಎಸ್. ಭಾರತಿ ನೀಡಿದ ದೂರಿನಂತೆ, ಶೋಭಾ ವಿರುದ್ಧ 48 ಕಂಟೆಗಳಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಡಿ ಕ್ರಮ ಕೈಗೊಳ್ಳುವಂತೆ ಆಯೋಗ ಸೂಚಿಸಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಗಳು ತಮಿಳಿನವರು, ತಮಿಳುನಾಡಿನಿಂದ ಇಲ್ಲಿ ಬಂದು ತರಬೇತಿ ಪಡೆದು ವಿಧ್ವಂಸಕ ಕೃತ್ಯ ಎಸಗುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಗರ್ತಪೇಟೆಯ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶೋಭಾ ವಿರುದ್ಧ ಮಧುರೈ ನಗರ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶೋಭಾ ಕರಂದ್ಲಾಜೆ ಅವರ ಹೇಳಿಕೆಯನ್ನು ಖಂಡಿಸಿ 'ಎಕ್ಸ್' ನಲ್ಲಿ ಪೋಸ್ಟ್ ಹಾಕಿದ್ದರು. ಅಲ್ಲದೆ ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.
ಮಧುರೈನ ಸಿ. ತ್ಯಾಗರಾಜನ್ ಎಂಬವರು ಶೋಭಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣವನ್ನು ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿರುವ ಸಮಯದಲ್ಲಿ ಶೋಭಾ ಅವರ ಹೇಳಿಕೆಯು ತಮಿಳು ಮತ್ತು ಕನ್ನಡಿಗರ ನಡುವೆ ದ್ವೇಷ ಮೂಡಿಸುವಂತಿದೆ ಎಂದು ಟೀಕಿಸಿದ್ದಾರೆ. ತಮಿಳು ಜನರನ್ನು ಭಯೋತ್ಪಾದಕರು ಎಂಬಂತೆ ಹೇಳಿಕೆ ನೀಡಿದ್ದಾರೆ. ಇದು ಉಭಯ ರಾಜ್ಯಗಳ ಸಂಬಂಧವನ್ನು ಹಾಳು ಮಾಡುತ್ತದೆ ಮತ್ತು ಎರಡೂ ರಾಜ್ಯಗಳ ನಡುವೆ ಉದ್ವಿಗ್ನ ಸ್ಥಿತಿ ಉಂಟುಮಾಡುತ್ತದೆ ಎಂದಿದ್ದಾರೆ.
ದೂರಿನ ಆಧಾರದ ಮೇಲೆ ಮಧುರೈ ನಗರದ ಸೈಬರ್ ಕ್ರೈಂ ಠಾಣೆ ಪೊಲೀಸರು ಶೋಭಾ ವಿರುದ್ಧ ಐಪಿಸಿ ಸೆಕ್ಷನ್ 153, 153 ಎ, 505 (1) (ಬಿ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Hours after Union Minister Shobha Karandlaje’s assertion that the suspect involved in the March 1 blast at The Rameshwaram Cafe was from Tamil Nadu stirred controversy, the Bharatiya Janata Party (BJP) leader issued a retraction and offered an apology.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 05:32 pm
Mangalore Correspondent
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm