ಬ್ರೇಕಿಂಗ್ ನ್ಯೂಸ್
21-03-24 12:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆಂಬ ಹೇಳಿಕೆ ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕುತ್ತಿಗೆ ಹಿಡಿದಿದೆ. ನೀತಿ ಸಂಹಿತೆ ಜಾರಿ ಇದ್ದರೂ ಕೋಮು ಭಾಷಣ ಮಾಡಿದ ಆರೋಪದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಡಿಎಂಕೆ ದೂರು ಆಧರಿಸಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ.
ಕೇಂದ್ರ ಸಚಿವೆ ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ನಾಯಕರು ದೂರು ನೀಡಿದ್ದಾರೆ. ಶೋಭಾ ಕರಂದ್ಲಾಜೆ ದ್ವೇಷ ಹರಡುವ ಕೆಲಸ ಮಾಡ್ತಿದ್ದಾರೆ, ಕನ್ನಡಿಗರು-ತಮಿಳಿಗರ ಮಧ್ಯೆ ದ್ವೇಷ ಮೂಡಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ವತಃ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಗ್ರಹಿಸಿದ್ದರು. ಅಲ್ಲದೆ, ಮಧುರೈನಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದರ ಬೆನ್ನಲ್ಲೇ ತನ್ನ ಹೇಳಿಕೆ ಬಗ್ಗೆ ಶೋಭಾ ಕರಂದ್ಲಾಜೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದರು.


ಇದೇ ವೇಳೆ, ಚಿಕ್ಕಪೇಟೆ ಚುನಾವಣಾಧಿಕಾರಿ ನೀಡಿದ ದೂರಿನ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ನಗರತ್ ಪೇಟೆಯಲ್ಲಿ ಪ್ರತಿಭಟನೆ ಮಾಡಿ ಭಾಷಣ ಮಾಡಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153a, 295a, RP act 123(3a) ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ತೇಜಸ್ವಿ ಸೂರ್ಯ ಕೋಮು ದ್ವೇಷಕ್ಕೆ ಪ್ರಚೋದನೆ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.
Hanuman Chalisa Bangalore, FIR on Shobha Karandlaje, and Tejasvi Surya for violating the rules of the election code of conduct and instigating people to disturb communal harmony in Bangalore.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm