ಬ್ರೇಕಿಂಗ್ ನ್ಯೂಸ್
21-03-24 12:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆಂಬ ಹೇಳಿಕೆ ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕುತ್ತಿಗೆ ಹಿಡಿದಿದೆ. ನೀತಿ ಸಂಹಿತೆ ಜಾರಿ ಇದ್ದರೂ ಕೋಮು ಭಾಷಣ ಮಾಡಿದ ಆರೋಪದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಡಿಎಂಕೆ ದೂರು ಆಧರಿಸಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ.
ಕೇಂದ್ರ ಸಚಿವೆ ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ನಾಯಕರು ದೂರು ನೀಡಿದ್ದಾರೆ. ಶೋಭಾ ಕರಂದ್ಲಾಜೆ ದ್ವೇಷ ಹರಡುವ ಕೆಲಸ ಮಾಡ್ತಿದ್ದಾರೆ, ಕನ್ನಡಿಗರು-ತಮಿಳಿಗರ ಮಧ್ಯೆ ದ್ವೇಷ ಮೂಡಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ವತಃ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಗ್ರಹಿಸಿದ್ದರು. ಅಲ್ಲದೆ, ಮಧುರೈನಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದರ ಬೆನ್ನಲ್ಲೇ ತನ್ನ ಹೇಳಿಕೆ ಬಗ್ಗೆ ಶೋಭಾ ಕರಂದ್ಲಾಜೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದರು.
ಇದೇ ವೇಳೆ, ಚಿಕ್ಕಪೇಟೆ ಚುನಾವಣಾಧಿಕಾರಿ ನೀಡಿದ ದೂರಿನ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ನಗರತ್ ಪೇಟೆಯಲ್ಲಿ ಪ್ರತಿಭಟನೆ ಮಾಡಿ ಭಾಷಣ ಮಾಡಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153a, 295a, RP act 123(3a) ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ತೇಜಸ್ವಿ ಸೂರ್ಯ ಕೋಮು ದ್ವೇಷಕ್ಕೆ ಪ್ರಚೋದನೆ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.
Hanuman Chalisa Bangalore, FIR on Shobha Karandlaje, and Tejasvi Surya for violating the rules of the election code of conduct and instigating people to disturb communal harmony in Bangalore.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 05:32 pm
Mangalore Correspondent
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm