ಬ್ರೇಕಿಂಗ್ ನ್ಯೂಸ್
21-03-24 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಮೆಟ್ರೋ ರೈಲು ಸಂಚರಿಸುತ್ತಿದ್ದ ವೇಳೆಯೇ ಹಳಿಗೆ ಹಾರಿ ಮುಂಬೈ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಮಹಾರಾಷ್ಟ್ರ ಮೂಲದ ಧೃವ್ ಠಕ್ಕರ್(19) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 2.10ಕ್ಕೆ ಘಟನೆ ನಡೆದಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ವಿದ್ಯಾರ್ಥಿ ಫೋನಲ್ಲಿ ಮಾತಾಡುತ್ತಲೇ ಹಳಿ ಮೇಲೆ ಹಠಾತ್ ಜಿಗಿದಿದ್ದಾನೆ. ರೈಲು ಆತನ ಮೇಲೆ ಹರಿದಿದ್ದು, ರುಂಡ ಮುಂಡ ಬೇರೆಯಾಗಿತ್ತು. ಅಧಿಕಾರಿಗಳು ಶವವನ್ನು ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇದರಿಂದಾಗಿ ಕೆಲಹೊತ್ತು ಮಾಗಡಿ ರಸ್ತೆಯಿಂದ ಚಲ್ಲಘಟ್ಟದ ವರೆಗೆ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಸ್ಥಳ ಮಹಜರು ನಡೆಸಿ ಹಳಿ ಮೇಲೆ ಬಿದ್ದಿದ್ದ ದೇಹದ ಭಾಗಗಳನ್ನು ಸಂಗ್ರಹಿಸಿ ಆಸ್ಪತ್ರೆಗೆ ರವಾನಿಸಿದರು. ಯುವಕ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಘಟನೆಗೆ ಸಂಬಂಧಿಸಿ ಚಂದ್ರಾಲೇಔಟ್ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದು ಆತ್ಮಹತ್ಯೆಯೋ, ಅಲ್ಲವೋ ಎನ್ನುವ ಕುರಿತು ಸಿಸಿಟಿವಿ ಫೂಟೇಜ್ ಸಹಿತ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆದಿದ್ದಾರೆ.
A Mumbai-based student allegedly committed suicide by jumping off the tracks while the metro train was on its way. The incident took place at Athiguppe metro station in Bengaluru. The deceased has been identified as Dhruv Thakkar (19), a native of Maharashtra.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm