ಬ್ರೇಕಿಂಗ್ ನ್ಯೂಸ್
22-03-24 01:15 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಹೈಕೋರ್ಟ್ ಏಕಸದಸ್ಯ ಪೀಠದ ಮಧ್ಯಪ್ರವೇಶದಿಂದಾಗಿ ಮಧ್ಯದಲ್ಲೇ ತಡೆಹಿಡಿಯಲ್ಪಟ್ಟಿದ್ದ 5, 8 ಮತ್ತು 9ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ಮತ್ತೆ ಮುಂದುವರಿಸಲು ರಾಜ್ಯ ಹೈಕೋರ್ಟ್ ದ್ವಿಸದಸ್ಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಪರೀಕ್ಷೆ ಕುರಿತ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿಹಿಡಿದಿದೆ.
ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ವತಿಯಿಂದ ನಡೆಸುವ ಪರೀಕ್ಷೆಗೆ ಅನುಮತಿ ನೀಡಿರುವುದಲ್ಲದೆ, ಇತರೇ ವಿಷಯಗಳ ಪರೀಕ್ಷೆ ನಡೆಸುವುದಕ್ಕೂ ತುರ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿದೆ.
5, 8 ಮತ್ತು 9ನೇ ತರಗತಿಯ ಉಳಿದಿರುವ ಪರೀಕ್ಷೆಗಳನ್ನು ಸೋಮವಾರದಿಂದಲೇ ನಡೆಸಲು ಸರ್ಕಾರಕ್ಕೆ ಸೂಚಿಸಿದೆ. ಈಗಾಗಲೇ ಐದನೇ ತರಗತಿಯ ನಾಲ್ಕು ವಿಷಯಗಳ ಪೈಕಿ ಎರಡು ಪರೀಕ್ಷೆ ಮುಗಿದಿದೆ. 8 ಹಾಗೂ 9 ತರಗತಿಗಳ ನಾಲ್ಕು ವಿಷಯಗಳ ಪರೀಕ್ಷೆ ನಡೆದಿದೆ. ಮಾರ್ಚ್ 13ರಂದು ಖಾಸಗಿ ಶಾಲೆಗಳ ಮೇಲ್ಮನವಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿ, ಹೈಕೋರ್ಟ್ನಲ್ಲೇ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಲು ಸೂಚಿಸಿತ್ತು. ಅದರಂತೆ, ಹೈಕೋರ್ಟ್ ತೀರ್ಪು ನೀಡಿದ್ದು ತಾವು ಹೇಳಿದ್ದೇ ನಡೆಯಬೇಕೆಂಬ ಖಾಸಗಿ ಶಾಲೆಗಳ ಒಕ್ಕೂಟದ ನಡೆಗೆ ಚಾಟಿ ಬೀಸಿದೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯೋಜಿಸಿದ್ದ ಪಬ್ಲಿಕ್ ಪರೀಕ್ಷೆ ಮಾರ್ಚ್ 11ರಿಂದ ತೊಡಗಿ ಮಾರ್ಚ್ 18ಕ್ಕೆ ಮುಗಿಯಬೇಕಿತ್ತು. ಮಾರ್ಚ್ 12ರಂದು ಹೈಕೋರ್ಟ್ ಬಳಿಕ ಸುಪ್ರೀಂಕೋರ್ಟ್ ಕದ ತಟ್ಟಿ ತಡೆಯಾಜ್ಞೆ ತಂದಿದ್ದರಿಂದ ಪರೀಕ್ಷೆ ಅರ್ಧಕ್ಕೆ ನಿಲ್ಲುವಂತಾಗಿತ್ತು. ಇದರಿಂದ ಶಿಕ್ಷಕರು, ಸಿಬಂದಿ ಜೊತೆಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಈಡಾಗಿದ್ದರು. ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವಾಗಲೇ ಇತರ ತರಗತಿಗಳ ಪಬ್ಲಿಕ್ ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.
A two-judge bench of the Karnataka High Court has given the green signal to resume the public examinations for classes 5, 8 and 9, which were put on hold midway due to the intervention of a single-judge bench of the High Court. A division bench of the high court upheld the appeal filed against the single-judge bench's order quashing the education department's circular on the examination.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 05:32 pm
Mangalore Correspondent
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm