ಬ್ರೇಕಿಂಗ್ ನ್ಯೂಸ್
26-03-24 03:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.26: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಬ್ಬರನ್ನು ರಾಜಧಾನಿ ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಈಗಾಗಲೇ ಸ್ಫೋಟದ ಪ್ರಧಾನ ಆರೋಪಿಗಳು ಮುಸಾವೀರ್, ಅಬ್ದುಲ್ ಮತೀನ್ ತಾಹ್ಯ ಎಂದು ಪತ್ತೆ ಹಚ್ಚಲಾಗಿದೆ. ಇವರ ಜೊತೆ ಈ ಆರೋಪಿಗಳು ನಿರಂತರ ಸಂಪರ್ಕದಲ್ಲಿದ್ದರು. ಇವರು ಬೆಂಗಳೂರಿನಲ್ಲಿದ್ದು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಶಂಕೆ ಇದೆ. ಅಲ್ಲದೆ, ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲ ಮಾಡಿಕೊಟ್ಟಿರುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟಿದ್ದಾನೆ ಎಂಬ ಮಾಹಿತಿಯನ್ನು ಕಲೆಹಾಕಿದ್ದು ಅದಕ್ಕೂ ಮುನ್ನ ಎರಡು ತಿಂಗಳ ಕಾಲ ತಮಿಳುನಾಡಿನಲ್ಲಿ ಉಳಿದಿದ್ದರು ಎಂಬುದನ್ನು ಪತ್ತೆ ಮಾಡಿದ್ದಾರೆ. ಮುಸಾವಿರ್ ಮತ್ತು ಅಬ್ದುಲ್ ಮತೀನ್ ಎರಡು ತಿಂಗಳು ತಮಿಳುನಾಡಿನ ಲಾಡ್ಜ್ನಲ್ಲಿ ಇವರು ಉಳಿದುಕೊಂಡಿರುವುದು ಪತ್ತೆಯಾಗಿದೆ. ಸ್ಫೋಟಕ್ಕೆ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರೇ ಅಥವಾ ಇನ್ನಷ್ಟು ದೊಡ್ಡ ಉಗ್ರ ಕೃತ್ಯದ ತಯಾರಿ ನಡೆಸುತ್ತಿದ್ದರೇ ಎಂಬ ಅಂಶವನ್ನು ತನಿಖೆ ಮಾಡಲಾಗುತ್ತಿದೆ.
ಮತ್ತೊಂದೆಡೆ, ಭಯೋತ್ಪಾದಕ ಎಸೆದುಹೋದ ಕ್ಯಾಪ್ನಲ್ಲಿ ಶಂಕಿತನ ಕೂದಲು ದೊರೆತಿದ್ದು, ಅದನ್ನು ಡಿಎನ್ಎ ಟೆಸ್ಟ್ಗೆ ಒಳಪಡಿಸಲಾಗಿದೆ. ಸದ್ಯ ಸಿಸಿಟಿವಿಗಳನ್ನು ಆಧರಿಸಿ ನಡೆದಿರುವ ತನಿಖೆಯಲ್ಲಿ ಸಿಕ್ಕಿರುವ ಈ ಮಹತ್ವದ ಲೀಡ್ ಎನ್ಐಎ ತನಿಖೆಗೆ ಪೂರಕವಾಗಿದೆ.
ತನಿಖೆಯ ಆರಂಭದಲ್ಲಿ ಎನ್ಐಎ ನಾಲ್ಕು ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಂಕಿತ ಆರೋಪಿಯ ಮುಖ ಬಹುತೇಕ ಸ್ಪಷ್ಟವಾಗಿ ಕಾಣಿಸಿತ್ತು. ಈ ವ್ಯಕ್ತಿ ಕಂಡುಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿತ್ತು. ಪೋನ್ ನಂಬರ್ ಮತ್ತು ಇ ಮೇಲ್ ಐಡಿ ಕೊಟ್ಟು ಮಾಹಿತಿ ನೀಡುವಂತೆ ಮನವಿ ಮಾಡಿದೆ. ಹಾಗಿದ್ದರೂ ಆರೋಪಿ ಕರ್ನಾಟಕದಲ್ಲಿ ಉಳಿದುಕೊಂಡಿರುವ ಬಗ್ಗೆ ಶಂಕೆಯಿಲ್ಲ.
In the ongoing investigation into the recent bomb blast at Rameshwaram café in Bengaluru, the National Investigation Agency (NIA) has detained two individuals suspected to be connected to the incident. The agency is intensifying its efforts to track down the perpetrator responsible for planting the explosive device.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm