ಬ್ರೇಕಿಂಗ್ ನ್ಯೂಸ್
27-03-24 11:53 am HK News Desk ಕರ್ನಾಟಕ
ಶಿವಮೊಗ್ಗ, ಮಾ.27: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್ಐಎ ಟೀಂ ದಾಳಿ ನಡೆಸಿದ್ದು ಹಲವರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನಲ್ಲಿ ಎನ್ಐಎ ದಾಳಿ ನಡೆಸಿದ್ದಾರೆ. ಕೆಲವು ಶಂಕಿತರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆದಿದ್ದು ತೀವ್ರ ಶೋಧ ನಡೆಸಿದ್ದಾರೆ.
ಕೆಫೆ ಬ್ಲಾಸ್ಟ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದು ಅದರ ಬೆನ್ನಲ್ಲೇ ತೀರ್ಥಹಳ್ಳಿಯಲ್ಲಿ ದಾಳಿಯಾಗಿದೆ. ಹೀಗಾಗಿ ಕೆಫೆ ಬಾಂಬ್ ಸ್ಫೋಟದ ಕೃತ್ಯವನ್ನು ತೀರ್ಥಹಳ್ಳಿ ಮೂಲದವರೇ ಮಾಡಿರುವ ಬಗ್ಗೆ ಗಂಭೀರ ಅನುಮಾನ ಮೂಡಿದೆ. ಈಗಾಗಲೇ ತೀರ್ಥಹಳ್ಳಿ ಮೂಲದ ಮುಸಾವಿರ್ ಎಂಬಾತ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕೆಲವು ಸಾಕ್ಷ್ಯಗಳನ್ನು ಉಲ್ಲೇಖಿಸಿ ವರದಿಯಾಗಿತ್ತು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್, ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ನಿವಾಸಿಯಾಗಿದ್ದ. ಇದೀಗ ಅದೇ ಜಾಗದಲ್ಲಿ ಎನ್ಐಎ ದಾಳಿ ನಡೆದಿರುವುದರಿಂದ ಸಂಬಂಧಿಕರ ಮನೆಗಳಲ್ಲಿ ಶೋಧ ನಡೆಸಿದ್ದಾರೆ ಎನ್ನಲಾಗುತ್ತಿದೆ.
National Investigation Agency (NIA) officials conducted simultaneous raids at several locations in Thirthahalli on Wednesday morning reportedly in connection with the Bengaluru Rameshwaram Cafe blast case.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm