ಬ್ರೇಕಿಂಗ್ ನ್ಯೂಸ್
27-03-24 11:53 am HK News Desk ಕರ್ನಾಟಕ
ಶಿವಮೊಗ್ಗ, ಮಾ.27: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್ಐಎ ಟೀಂ ದಾಳಿ ನಡೆಸಿದ್ದು ಹಲವರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನಲ್ಲಿ ಎನ್ಐಎ ದಾಳಿ ನಡೆಸಿದ್ದಾರೆ. ಕೆಲವು ಶಂಕಿತರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆದಿದ್ದು ತೀವ್ರ ಶೋಧ ನಡೆಸಿದ್ದಾರೆ.
ಕೆಫೆ ಬ್ಲಾಸ್ಟ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದು ಅದರ ಬೆನ್ನಲ್ಲೇ ತೀರ್ಥಹಳ್ಳಿಯಲ್ಲಿ ದಾಳಿಯಾಗಿದೆ. ಹೀಗಾಗಿ ಕೆಫೆ ಬಾಂಬ್ ಸ್ಫೋಟದ ಕೃತ್ಯವನ್ನು ತೀರ್ಥಹಳ್ಳಿ ಮೂಲದವರೇ ಮಾಡಿರುವ ಬಗ್ಗೆ ಗಂಭೀರ ಅನುಮಾನ ಮೂಡಿದೆ. ಈಗಾಗಲೇ ತೀರ್ಥಹಳ್ಳಿ ಮೂಲದ ಮುಸಾವಿರ್ ಎಂಬಾತ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕೆಲವು ಸಾಕ್ಷ್ಯಗಳನ್ನು ಉಲ್ಲೇಖಿಸಿ ವರದಿಯಾಗಿತ್ತು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್, ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ನಿವಾಸಿಯಾಗಿದ್ದ. ಇದೀಗ ಅದೇ ಜಾಗದಲ್ಲಿ ಎನ್ಐಎ ದಾಳಿ ನಡೆದಿರುವುದರಿಂದ ಸಂಬಂಧಿಕರ ಮನೆಗಳಲ್ಲಿ ಶೋಧ ನಡೆಸಿದ್ದಾರೆ ಎನ್ನಲಾಗುತ್ತಿದೆ.
National Investigation Agency (NIA) officials conducted simultaneous raids at several locations in Thirthahalli on Wednesday morning reportedly in connection with the Bengaluru Rameshwaram Cafe blast case.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm