ಬ್ರೇಕಿಂಗ್ ನ್ಯೂಸ್
27-03-24 05:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಯ್ಕೆ ವಿಚಾರದಲ್ಲಿ ಶಾಸಕರ ನಡುವಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಮ್ಮ ಅಳಿಯನಿಗೆ ಟಿಕೆಟ್ ನೀಡುವಂತೆ ಪಟ್ಟುಹಿಡಿದಿದ್ದಾರೆ. ರಮೇಶ್ ಕುಮಾರ್ ಬಣ ತಾವು ಬೆಂಬಲಿಸುವ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇದೇ ವೇಳೆ, ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಆಗಿದೆ ಎಂಬ ಸುದ್ದಿ ತಿಳಿದ ಕೋಲಾರದ ಐವರು ಶಾಸಕರು ರಾಜಿನಾಮೆ ನೀಡುವುದಾಗಿ ಹೇಳಿ ಹೈಡ್ರಾಮಾ ನಡೆಸಿದ್ದಾರೆ. ಇದಲ್ಲದೆ, ಕೋಲಾರದ ರಾಜಕೀಯ ಬಿಕ್ಕಟ್ಟಿನಿಂದ ಬೇಸತ್ತ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ರಾಜೀನಾಮೆ ನೀಡಲು ಮುಂದಾಗಿರುವುದು ಕಾಂಗ್ರೆಸ್ಗೆ ಶಾಕ್ ನೀಡಿದೆ.
ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡುವುದನ್ನು ಖಂಡಿಸಿ ಕೋಲಾರ ಭಾಗದ ನಾಲ್ವರು ಶಾಸಕರು ಮತ್ತು ಸಚಿವ ಎಂಸಿ ಸುಧಾಕರ್ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರಂತೆ. ವಿಧಾನ ಪರಿಷತ್ ಸದಸ್ಯರಾದ ನಜೀರ್ ಅಹ್ಮದ್ ಹಾಗೂ ಅನಿಲ್ ಕುಮಾರ್ ರಾಜೀನಾಮೆ ಪತ್ರವನ್ನು ಬರೆದು ಅದನ್ನು ಮಾಧ್ಯಮಕ್ಕೆ ತೋರಿಸಿದ್ದು ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜಿನಾಮೆ ನೀಡುತ್ತೇವೆಂದು ಹೇಳುತ್ತಿರುವಾಗಲೇ ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಹೈಕಮಾಂಡ್ ಸೂಚನೆ ಮೇರೆಗೆ ವಿಧಾನಸೌಧಕ್ಕೆ ಆಗಮಿಸಿ, ಶಾಸಕರ ಮನವೊಲಿಕೆಗೆ ಮುಂದಾದರು.
ಲೋಕಸಭೆ ಟಿಕೆಟ್ ಬಗ್ಗೆ ಇಂದು ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಶಾಸಕರೊಂದಿಗೆ ಚರ್ಚಿಸಲಿದ್ದು ಅಲ್ಲಿ ಚರ್ಚೆ ಮಾಡೋಣ. ಈಗ ರಾಜೀನಾಮೆ ಕೊಡುವುದು ಬೇಡ ಎಂದು ವಿಧಾನ ಪರಿಷತ್ ಸದಸ್ಯರಿಗೆ ಮನವೊಲಿಸಿದರು. ಅದಕ್ಕೆ ಶಾಸಕರು ಒಪ್ಪಿ ರಾಜೀನಾಮೆ ನೀಡುವುದನ್ನು ಕೈಬಿಟ್ಟರು.
ಇದೇ ವೇಳೆ ಸಚಿವ ಎಂ.ಸಿ. ಸುಧಾಕರ್ ಮಾತನಾಡಿ, ಮುನಿಯಪ್ಪ ನನ್ನನ್ನು ಎರಡು ಬಾರಿ ಸೋಲಿಸಿದ್ದು ಆಮೇಲೆ ಪಕ್ಷದಿಂದ ಟಿಕೆಟ್ ಸಿಗದೆ ಪಕ್ಷೇತರನಾಗಿ ಸ್ಪರ್ಧೆ ಮಾಡುವಂತಾಗಿತ್ತು. ಆ ನೋವು ಇದೆ. ಜೊತೆಗೆ ನಮ್ಮ ಕ್ಷೇತ್ರದ ಕಾರ್ಯಕರ್ತರಿಗೂ ಮುನಿಯಪ್ಪ ನೋವು ಕೊಟ್ಟಿದ್ದಾರೆ. ಹೀಗಾಗಿ ಅವರ ಕುಟುಂಬಕ್ಕೆ ಟಿಕೆಟ್ ಕೊಡಬಾರದು ಎಂದು ಹೇಳಿಕೆ ನೀಡಿದ್ದಾರೆ.
The tussle over the Congress Lok Sabha ticket for the Kolar constituency in Karnataka took a dramatic turn on Wednesday after three party MLAs and two MLCs arrived at the Vidhana Soudha and threatened to tender their resignations over the issue.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 06:22 pm
HK News Staffer
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 07:27 pm
HK News Staffer
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm