ಬ್ರೇಕಿಂಗ್ ನ್ಯೂಸ್
27-03-24 08:56 pm HK NEWS ಕರ್ನಾಟಕ
ಬೆಂಗಳೂರು, ಮಾ.27: ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಆಮೂಲಕ ಹಾಲಿ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿಗೆ ಕೊಕ್ ನೀಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದಲ್ಲಿ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದ, ಯಡಿಯೂರಪ್ಪ ಪಾಳಯದ ಹಿಂದುಳಿದ ವರ್ಗದ ನಾಯಕ, ಐದು ಬಾರಿಯ ಶಾಸಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಅಂತಿಮಗೊಳಿಸಿರುವುದನ್ನ ಬಿಜೆಪಿ ಘೋಷಣೆ ಮಾಡಿದೆ. ಇದರೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಎಲ್ಲ 25 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದಂತಾಗಿದೆ.
ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿಂದಿನಿಂದಲೂ ಪ್ರತಿ ಬಾರಿ ಹೊಸಬರನ್ನು ಕಣಕ್ಕಿಳಿಸುತ್ತ ಬಂದಿದೆ. ಈ ಬಾರಿ ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಮಾದಾರ ಚನ್ನಯ್ಯ ಸ್ವಾಮೀಜಿ, ಜನಾರ್ದನ ಸ್ವಾಮಿ ಸಹಿತ ಹಲವರ ಹೆಸರು ಕೇಳಿಬಂದಿದ್ದವು. ಗೋವಿಂದ ಕಾರಜೋಳ ಹೆಸರು ವಿಜಯಪುರ ಕ್ಷೇತ್ರಕ್ಕೂ ಕೇಳಿಬಂದಿತ್ತು.
ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಸಹಾಯಕರಾಗಿ ವೃತ್ತಿ ಆರಂಭಿಸಿ ಬಳಿಕ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದ ಕಾರಜೋಳ, ಆನಂತರ ಅದೇ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವರಾಗಿದ್ದು ಕಾಕತಾಳೀಯ ಆಗಿತ್ತು. ಮೂಲತಃ ವಿಜಯಪುರ ಜಿಲ್ಲೆಯವರಾಗಿದ್ದರೂ ರಾಜಕೀಯ ಸಾಧನೆ ಮಾಡಿದ್ದು ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ. ಈಗ ಚಿತ್ರದುರ್ಗ ಜಿಲ್ಲೆಗೆ ಅವರ ರಾಜಕೀಯ ಸ್ಥಳಾಂತರಗೊಂಡಿದೆ. ಕಳೆದ ಬಾರಿ ಬೆಂಗಳೂರು ಆನೇಕಲ್ ಮೂಲದ ನಾರಾಯಣ ಸ್ವಾಮಿ ಚಿತ್ರದುರ್ಗದಲ್ಲಿ ಲೋಕಸಭೆ ಕಣಕ್ಕಿಳಿದು ಸಂಸದರಾಗಿದ್ದರು.
BJP Loksabha election 7th list released, Govind karjol to Fight Lok Sabha Elections From Chitradurga on bjp ticket BJP
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm