ಬ್ರೇಕಿಂಗ್ ನ್ಯೂಸ್
28-11-20 04:32 pm Headline Karnataka News Network ಕರ್ನಾಟಕ
ಕಾರವಾರ, ನ.28: ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರೆ, ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಿ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಏನೋ ಸ್ವಲ್ಪ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಡಿಕೆಶಿ ಈ ರೀತಿ ತಿರುಗೇಟು ನೀಡಿದರು. ಶನಿವಾರ ಕಾರವಾರಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಹಿಂದಿನ ಸರಕಾರದಲ್ಲಿ ನಾನು ಕೂಡ ಭಾಗವಾಗಿದ್ದೆ. ನನ್ನ ಮೇಲೂ ಎಫ್ಐಆರ್ ಹಾಕಲಿ. ನಮ್ಮ ಸರಕಾರದಲ್ಲಿದ್ದವರು ಇದೀಗ ಅವರ ಸರಕಾರದಲ್ಲೂ ಇದ್ದಾರಲ್ಲ, ಅವರ ಮೇಲೂ ಎಫ್ಐಆರ್ ದಾಖಲಿಸಲಿ ಎಂದು ಕುಟುಕಿದರು.

ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ. ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣದ ಹಿಂದೆ ಗೌಪ್ಯವಾದ ವಿಚಾರಗಳು ಅಡಗಿವೆ. ಆದ್ದರಿಂದ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅದು ಸರಕಾರದ ಮಟ್ಟದಲ್ಲಿ ನಡೆದರೆ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಸರಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಬಿಜೆಪಿಯವರ ಆಂತರಿಕ ವಿಚಾರಗಳಲ್ಲಿ ನಾವು ತಲೆ ಹಾಕುವುದಿಲ್ಲ. ನಮ್ಮ ಪಕ್ಷದಿಂದ ಅಲ್ಲಿಗೆ ಹೋದ ಕೆಲವರು ಬಿಜೆಪಿಗೇನು ಮಾಡಬೇಕೋ ಅದನ್ನು ಮಾಡ್ತಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸ್ತಾರೆ ಎಂದು ಹೇಳಿದರು.
Congress Dk Shivakumar has mocked at Naleen Kumar Kateel saying he's mentally not well.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm