ಬ್ರೇಕಿಂಗ್ ನ್ಯೂಸ್
28-11-20 04:32 pm Headline Karnataka News Network ಕರ್ನಾಟಕ
ಕಾರವಾರ, ನ.28: ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರೆ, ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಿ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಏನೋ ಸ್ವಲ್ಪ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಡಿಕೆಶಿ ಈ ರೀತಿ ತಿರುಗೇಟು ನೀಡಿದರು. ಶನಿವಾರ ಕಾರವಾರಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಹಿಂದಿನ ಸರಕಾರದಲ್ಲಿ ನಾನು ಕೂಡ ಭಾಗವಾಗಿದ್ದೆ. ನನ್ನ ಮೇಲೂ ಎಫ್ಐಆರ್ ಹಾಕಲಿ. ನಮ್ಮ ಸರಕಾರದಲ್ಲಿದ್ದವರು ಇದೀಗ ಅವರ ಸರಕಾರದಲ್ಲೂ ಇದ್ದಾರಲ್ಲ, ಅವರ ಮೇಲೂ ಎಫ್ಐಆರ್ ದಾಖಲಿಸಲಿ ಎಂದು ಕುಟುಕಿದರು.

ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ. ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣದ ಹಿಂದೆ ಗೌಪ್ಯವಾದ ವಿಚಾರಗಳು ಅಡಗಿವೆ. ಆದ್ದರಿಂದ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅದು ಸರಕಾರದ ಮಟ್ಟದಲ್ಲಿ ನಡೆದರೆ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಸರಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಬಿಜೆಪಿಯವರ ಆಂತರಿಕ ವಿಚಾರಗಳಲ್ಲಿ ನಾವು ತಲೆ ಹಾಕುವುದಿಲ್ಲ. ನಮ್ಮ ಪಕ್ಷದಿಂದ ಅಲ್ಲಿಗೆ ಹೋದ ಕೆಲವರು ಬಿಜೆಪಿಗೇನು ಮಾಡಬೇಕೋ ಅದನ್ನು ಮಾಡ್ತಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸ್ತಾರೆ ಎಂದು ಹೇಳಿದರು.
Congress Dk Shivakumar has mocked at Naleen Kumar Kateel saying he's mentally not well.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm