ಬ್ರೇಕಿಂಗ್ ನ್ಯೂಸ್
29-03-24 03:40 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿರುವ ಟೀಕೆಗೆ ಬಿಜೆಪಿ ನಾಯಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ. ಇವರು ಎಂದಾದರೂ ಪಕ್ಷದ ಕೆಲಸವನ್ನ ಮಾಡಿದ್ದಾರೆಯೇ ಎಂದು ಯತೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![]()
1982ರಲ್ಲಿಯೇ ಅಮಿತ್ ಶಾ ಬಿಜೆಪಿಯ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು ಎಂದು ಯತೀಂದ್ರ ವಿರುದ್ಧ ರವಿ ಕೆಂಡಕಾರಿದ್ದಾರೆ.
ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಆ್ಯಕ್ಟ್ ಕೇಸ್ ಹಾಕಿದ್ದರು. ಹಾಗಾದ್ರೆ, ನಾನು ಗೂಂಡಾನಾ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
ಯತೀಂದ್ರ ಅಪ್ಪನ ಹೆಸರಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಇಂಥವರಿಗೆ ಬಡವರ ಕಷ್ಟ ಕಾಣಿಸುತ್ತದೆಯೇ? ಚುನಾವಣೆ ಮುಗಿದ ಮೇಲೆ ಇವರೆಲ್ಲ ಎಲ್ಲಿರುತ್ತಾರೋ ಎಂದು ರವಿ ವಾಗ್ದಾಳಿ ನಡೆಸಿದ್ದಾರೆ.

ಏನು ಹೇಳಿದ್ದರು ಯತೀಂದ್ರ ಸಿದ್ದರಾಮಯ್ಯ?
ಚಾಮರಾಜನಗರದ ಹನೂರಿನಲ್ಲಿ ಗುರುವಾರ ಕಾಂಗ್ರೆಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾ ಗುಜರಾತ್ನಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಅಪರಾಧ ಚಟುವಟಿಕೆಗಳ ಹಿನ್ನೆಲೆ ಇದೆ. ಆದರೆ ಈಗ ಅವರು ದೇಶದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಅವರೊಬ್ಬ ‘ಗೂಂಡಾ, ರೌಡಿ’ ಎಂದು ಟೀಕಿಸಿದ್ದರು.
Congress leader Yathindra Siddaramaiah on Thursday targeted BJP leader and Home minister Amit Shah by accusing him of being a 'goonda, rowdy'.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm