ಬ್ರೇಕಿಂಗ್ ನ್ಯೂಸ್
30-03-24 09:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.30: ಚಾಮರಾಜನಗರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಅವರು ದಿಢೀರ್ ಬೆಳವಣಿಗೆಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಧೀರಜ್ ಪ್ರಸಾದ್ ಅವರು ಪಕ್ಷ ಸೇರಿದ್ದಾರೆ. ಬಿಜೆಪಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಕುಟುಂಬದ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.
ಬಿಜೆಪಿ ಚಾಮರಾಜನಗರದಿಂದ ಮಾಜಿ ಶಾಸಕ ಬಾಲರಾಜ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ತನ್ನ ಪುತ್ರ ಅಥವಾ ಅಳಿಯನಿಗೆ ಟಿಕೆಟ್ ನೀಡುವಂತೆ ಶ್ರೀನಿವಾಸ ಪ್ರಸಾದ್ ಲಾಬಿ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಹಾಲಿ ಸಂಸದರ ಮಾತಿಗೆ ಮನ್ನಣೆ ನೀಡಿರಲಿಲ್ಲ. ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿರುವ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರೀಗ ಯಾರನ್ನು ಬೆಂಬಲಿಸುತ್ತಾರೆ ಎನ್ನುವ ಕುತೂಹಲ ಇದೆ.
ಎರಡು ದಿನಗಳ ಹಿಂದಷ್ಟೇ ಸಚಿವ ಎಚ್.ಟಿ ಮಹದೇವಪ್ಪ ಅವರು ತನ್ನ ಬೆಂಬಲಿಗರ ಜೊತೆಗೆ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿಯಾಗಿದ್ದರು. ಆಮೂಲಕ ತನಗೇನೂ ಅವರ ಜೊತೆ ವೈಮನಸ್ಸು ಇಲ್ಲ ಎನ್ನುವ ಸಂದೇಶ ಸಾರಿದ್ದರು. ಇದೀಗ ಸಂಸದರ ಅಳಿಯನೇ ಬಿಜೆಪಿಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರಿರುವುದು ಪಕ್ಷದಲ್ಲಿ ತಳಮಳ ಸೃಷ್ಟಿಯಾಗಿದೆ.
In a sudden development, Dheeraj Prasad, son-in-law of MP Srinivas Prasad, who was aspirant for BJP ticket from Chamarajanagar SC reserved Lok Sabha seat, joined the Congress in the presence of KPCC president DK Shivakumar on Friday.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm