ಬ್ರೇಕಿಂಗ್ ನ್ಯೂಸ್
30-03-24 09:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.30: ಚಾಮರಾಜನಗರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಅವರು ದಿಢೀರ್ ಬೆಳವಣಿಗೆಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಧೀರಜ್ ಪ್ರಸಾದ್ ಅವರು ಪಕ್ಷ ಸೇರಿದ್ದಾರೆ. ಬಿಜೆಪಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಕುಟುಂಬದ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.
ಬಿಜೆಪಿ ಚಾಮರಾಜನಗರದಿಂದ ಮಾಜಿ ಶಾಸಕ ಬಾಲರಾಜ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ತನ್ನ ಪುತ್ರ ಅಥವಾ ಅಳಿಯನಿಗೆ ಟಿಕೆಟ್ ನೀಡುವಂತೆ ಶ್ರೀನಿವಾಸ ಪ್ರಸಾದ್ ಲಾಬಿ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಹಾಲಿ ಸಂಸದರ ಮಾತಿಗೆ ಮನ್ನಣೆ ನೀಡಿರಲಿಲ್ಲ. ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿರುವ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರೀಗ ಯಾರನ್ನು ಬೆಂಬಲಿಸುತ್ತಾರೆ ಎನ್ನುವ ಕುತೂಹಲ ಇದೆ.
ಎರಡು ದಿನಗಳ ಹಿಂದಷ್ಟೇ ಸಚಿವ ಎಚ್.ಟಿ ಮಹದೇವಪ್ಪ ಅವರು ತನ್ನ ಬೆಂಬಲಿಗರ ಜೊತೆಗೆ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿಯಾಗಿದ್ದರು. ಆಮೂಲಕ ತನಗೇನೂ ಅವರ ಜೊತೆ ವೈಮನಸ್ಸು ಇಲ್ಲ ಎನ್ನುವ ಸಂದೇಶ ಸಾರಿದ್ದರು. ಇದೀಗ ಸಂಸದರ ಅಳಿಯನೇ ಬಿಜೆಪಿಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರಿರುವುದು ಪಕ್ಷದಲ್ಲಿ ತಳಮಳ ಸೃಷ್ಟಿಯಾಗಿದೆ.
In a sudden development, Dheeraj Prasad, son-in-law of MP Srinivas Prasad, who was aspirant for BJP ticket from Chamarajanagar SC reserved Lok Sabha seat, joined the Congress in the presence of KPCC president DK Shivakumar on Friday.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 06:22 pm
HK News Staffer
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 07:27 pm
HK News Staffer
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm