ಬ್ರೇಕಿಂಗ್ ನ್ಯೂಸ್
01-04-24 06:39 pm Bangalore Correspondent ಕರ್ನಾಟಕ
ಬೆಂಗಳೂರು, ಏ.01: ಮನೆಯ ಮುಂದೆ ಚಪ್ಪಲಿ ಸ್ಟ್ಯಾಂಡ್ ಇರಿಸುವ ವಿಚಾರಕ್ಕೆ ಇಬ್ಬರು ದಂಪತಿಗಳ ನಡುವೆ ಗಲಾಟೆ ಆರಂಭವಾಗಿ ಪೊಲೀಸ್ ಠಾಣಾ ಮೆಟ್ಟಿಲೇರಿದ ಘಟನೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿಯಲ್ಲಿ ನಡೆದಿದೆ.
ನೆರೆಮನೆಯಲ್ಲಿರುವ ಪ್ರಣಬ್ ಜ್ಯೋತಿ ಸಿಂಗ್-ನೇಹಾ ದಂಪತಿಯ ಕಾಟಕ್ಕೆ ಬೇಸತ್ತ ಮಂಜುನಾಥ್ ಹಾಗೂ ಸರಿತಾ ದಂಪತಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೋಡಿಚಿಕ್ಕನಹಳ್ಳಿಯ ಚೈತನ್ಯ ಪ್ಯಾರಡೈಸ್ ಅಪಾರ್ಟ್ಮೆಂಟಿನ 3ನೇ ಮಹಡಿಯಲ್ಲಿ ಮಂಜುನಾಥ್ ಮತ್ತು ಸರಿತಾ ದಂಪತಿ ವಾಸಿಸುತ್ತಿದ್ದಾರೆ. ಇವರ ಪಕ್ಕದ ಮನೆಯಲ್ಲಿ ನೇಹಾ ಹಾಗೂ ಪ್ರಣಬ್ ಜ್ಯೋತಿ ಸಿಂಗ್ ವಾಸವಿದ್ದಾರೆ. ಎರಡು ವರ್ಷಗಳಿಂದ ಮನೆ ಮುಂದೆ ಚಪ್ಪಲಿ ಸ್ಟ್ಯಾಂಡ್ ಇರಿಸುವ ವಿಚಾರಕ್ಕೆ ಎರಡೂ ಮನೆಯವರ ನಡುವೆ ಗಲಾಟೆಯಾಗಿತ್ತು. ಮಂಜುನಾಥ್ ದಂಪತಿಯ ಮನೆ ಬಾಗಿಲು ತೆರೆದರೆ ಕಾಣುವ ಹಾಗೆ ನೇಹಾ ತಮ್ಮ ಚಪ್ಪಲಿ ಸ್ಟ್ಯಾಂಡ್ ಇರಿಸಿರುತ್ತಿದ್ದರಂತೆ. ಇದರಿಂದ ಬೇಸತ್ತ ಮಂಜುನಾಥ್, ಮನೆ ಮುಂದೆ ಚಪ್ಪಲಿ ಸ್ಟ್ಯಾಂಡ್ ಇಡದಂತೆ ನೇಹಾಗೆ ಹೇಳಿದ್ದರು. ಈ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ.
ಅಂದಿನಿಂದಲೂ ಗಲಾಟೆ ಮುಂದುವರೆದು ಮಂಜುನಾಥ್ ಮನೆಯವರಿಗೆ ನೇಹಾ ದಿನನಿತ್ಯ ಕಿರುಕುಳ ನೀಡುತ್ತಿದ್ದರು. ಮನೆಯಿಂದ ಹೋಗುವಾಗ ಬರುವಾಗ ಉದ್ದೇಶಪೂರ್ವಕವಾಗಿ ಮಂಜುನಾಥ್ ಮನೆಯ ಚಪ್ಪಲಿ ಸ್ಟ್ಯಾಂಡ್ ಬೀಳಿಸುವುದು, ಮನೆ ಮುಂದೆ ಬಿಡಿಸಿದ್ದ ರಂಗೋಲಿಯನ್ನು ಕಾಲಿಂದ ಅಳಿಸುವ ಕೆಲಸ ಮಾಡುತ್ತಿದ್ದರು. ನಿತ್ಯ ಕಿರುಕುಳ ಸಹಿಸಲಾರದ ಮಂಜುನಾಥ್ ಹಾಗೂ ಸರಿತಾ ದಂಪತಿ, ನೇಹಾಳ ಕೃತ್ಯಗಳನ್ನೊಳಗೊಂಡ ಸಿಸಿಟಿವಿ ದೃಶ್ಯಗಳ ಸಮೇತ ಬೊಮ್ಮನಹಳ್ಳಿ ಠಾಣೆಗೆ ದೂರು ನೀಡಿದ್ದು, ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Bangalore police case filed over shoe stand fight. Neighbours who were fighting for shoe stand being kept at the door side have ended up in the police station.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm