ಬ್ರೇಕಿಂಗ್ ನ್ಯೂಸ್
01-04-24 06:39 pm Bangalore Correspondent ಕರ್ನಾಟಕ
ಬೆಂಗಳೂರು, ಏ.01: ಮನೆಯ ಮುಂದೆ ಚಪ್ಪಲಿ ಸ್ಟ್ಯಾಂಡ್ ಇರಿಸುವ ವಿಚಾರಕ್ಕೆ ಇಬ್ಬರು ದಂಪತಿಗಳ ನಡುವೆ ಗಲಾಟೆ ಆರಂಭವಾಗಿ ಪೊಲೀಸ್ ಠಾಣಾ ಮೆಟ್ಟಿಲೇರಿದ ಘಟನೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿಯಲ್ಲಿ ನಡೆದಿದೆ.
ನೆರೆಮನೆಯಲ್ಲಿರುವ ಪ್ರಣಬ್ ಜ್ಯೋತಿ ಸಿಂಗ್-ನೇಹಾ ದಂಪತಿಯ ಕಾಟಕ್ಕೆ ಬೇಸತ್ತ ಮಂಜುನಾಥ್ ಹಾಗೂ ಸರಿತಾ ದಂಪತಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೋಡಿಚಿಕ್ಕನಹಳ್ಳಿಯ ಚೈತನ್ಯ ಪ್ಯಾರಡೈಸ್ ಅಪಾರ್ಟ್ಮೆಂಟಿನ 3ನೇ ಮಹಡಿಯಲ್ಲಿ ಮಂಜುನಾಥ್ ಮತ್ತು ಸರಿತಾ ದಂಪತಿ ವಾಸಿಸುತ್ತಿದ್ದಾರೆ. ಇವರ ಪಕ್ಕದ ಮನೆಯಲ್ಲಿ ನೇಹಾ ಹಾಗೂ ಪ್ರಣಬ್ ಜ್ಯೋತಿ ಸಿಂಗ್ ವಾಸವಿದ್ದಾರೆ. ಎರಡು ವರ್ಷಗಳಿಂದ ಮನೆ ಮುಂದೆ ಚಪ್ಪಲಿ ಸ್ಟ್ಯಾಂಡ್ ಇರಿಸುವ ವಿಚಾರಕ್ಕೆ ಎರಡೂ ಮನೆಯವರ ನಡುವೆ ಗಲಾಟೆಯಾಗಿತ್ತು. ಮಂಜುನಾಥ್ ದಂಪತಿಯ ಮನೆ ಬಾಗಿಲು ತೆರೆದರೆ ಕಾಣುವ ಹಾಗೆ ನೇಹಾ ತಮ್ಮ ಚಪ್ಪಲಿ ಸ್ಟ್ಯಾಂಡ್ ಇರಿಸಿರುತ್ತಿದ್ದರಂತೆ. ಇದರಿಂದ ಬೇಸತ್ತ ಮಂಜುನಾಥ್, ಮನೆ ಮುಂದೆ ಚಪ್ಪಲಿ ಸ್ಟ್ಯಾಂಡ್ ಇಡದಂತೆ ನೇಹಾಗೆ ಹೇಳಿದ್ದರು. ಈ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ.
ಅಂದಿನಿಂದಲೂ ಗಲಾಟೆ ಮುಂದುವರೆದು ಮಂಜುನಾಥ್ ಮನೆಯವರಿಗೆ ನೇಹಾ ದಿನನಿತ್ಯ ಕಿರುಕುಳ ನೀಡುತ್ತಿದ್ದರು. ಮನೆಯಿಂದ ಹೋಗುವಾಗ ಬರುವಾಗ ಉದ್ದೇಶಪೂರ್ವಕವಾಗಿ ಮಂಜುನಾಥ್ ಮನೆಯ ಚಪ್ಪಲಿ ಸ್ಟ್ಯಾಂಡ್ ಬೀಳಿಸುವುದು, ಮನೆ ಮುಂದೆ ಬಿಡಿಸಿದ್ದ ರಂಗೋಲಿಯನ್ನು ಕಾಲಿಂದ ಅಳಿಸುವ ಕೆಲಸ ಮಾಡುತ್ತಿದ್ದರು. ನಿತ್ಯ ಕಿರುಕುಳ ಸಹಿಸಲಾರದ ಮಂಜುನಾಥ್ ಹಾಗೂ ಸರಿತಾ ದಂಪತಿ, ನೇಹಾಳ ಕೃತ್ಯಗಳನ್ನೊಳಗೊಂಡ ಸಿಸಿಟಿವಿ ದೃಶ್ಯಗಳ ಸಮೇತ ಬೊಮ್ಮನಹಳ್ಳಿ ಠಾಣೆಗೆ ದೂರು ನೀಡಿದ್ದು, ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Bangalore police case filed over shoe stand fight. Neighbours who were fighting for shoe stand being kept at the door side have ended up in the police station.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm