ಬ್ರೇಕಿಂಗ್ ನ್ಯೂಸ್
01-04-24 06:39 pm Bangalore Correspondent ಕರ್ನಾಟಕ
ಬೆಂಗಳೂರು, ಏ.01: ಮನೆಯ ಮುಂದೆ ಚಪ್ಪಲಿ ಸ್ಟ್ಯಾಂಡ್ ಇರಿಸುವ ವಿಚಾರಕ್ಕೆ ಇಬ್ಬರು ದಂಪತಿಗಳ ನಡುವೆ ಗಲಾಟೆ ಆರಂಭವಾಗಿ ಪೊಲೀಸ್ ಠಾಣಾ ಮೆಟ್ಟಿಲೇರಿದ ಘಟನೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿಯಲ್ಲಿ ನಡೆದಿದೆ.
ನೆರೆಮನೆಯಲ್ಲಿರುವ ಪ್ರಣಬ್ ಜ್ಯೋತಿ ಸಿಂಗ್-ನೇಹಾ ದಂಪತಿಯ ಕಾಟಕ್ಕೆ ಬೇಸತ್ತ ಮಂಜುನಾಥ್ ಹಾಗೂ ಸರಿತಾ ದಂಪತಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೋಡಿಚಿಕ್ಕನಹಳ್ಳಿಯ ಚೈತನ್ಯ ಪ್ಯಾರಡೈಸ್ ಅಪಾರ್ಟ್ಮೆಂಟಿನ 3ನೇ ಮಹಡಿಯಲ್ಲಿ ಮಂಜುನಾಥ್ ಮತ್ತು ಸರಿತಾ ದಂಪತಿ ವಾಸಿಸುತ್ತಿದ್ದಾರೆ. ಇವರ ಪಕ್ಕದ ಮನೆಯಲ್ಲಿ ನೇಹಾ ಹಾಗೂ ಪ್ರಣಬ್ ಜ್ಯೋತಿ ಸಿಂಗ್ ವಾಸವಿದ್ದಾರೆ. ಎರಡು ವರ್ಷಗಳಿಂದ ಮನೆ ಮುಂದೆ ಚಪ್ಪಲಿ ಸ್ಟ್ಯಾಂಡ್ ಇರಿಸುವ ವಿಚಾರಕ್ಕೆ ಎರಡೂ ಮನೆಯವರ ನಡುವೆ ಗಲಾಟೆಯಾಗಿತ್ತು. ಮಂಜುನಾಥ್ ದಂಪತಿಯ ಮನೆ ಬಾಗಿಲು ತೆರೆದರೆ ಕಾಣುವ ಹಾಗೆ ನೇಹಾ ತಮ್ಮ ಚಪ್ಪಲಿ ಸ್ಟ್ಯಾಂಡ್ ಇರಿಸಿರುತ್ತಿದ್ದರಂತೆ. ಇದರಿಂದ ಬೇಸತ್ತ ಮಂಜುನಾಥ್, ಮನೆ ಮುಂದೆ ಚಪ್ಪಲಿ ಸ್ಟ್ಯಾಂಡ್ ಇಡದಂತೆ ನೇಹಾಗೆ ಹೇಳಿದ್ದರು. ಈ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ.
ಅಂದಿನಿಂದಲೂ ಗಲಾಟೆ ಮುಂದುವರೆದು ಮಂಜುನಾಥ್ ಮನೆಯವರಿಗೆ ನೇಹಾ ದಿನನಿತ್ಯ ಕಿರುಕುಳ ನೀಡುತ್ತಿದ್ದರು. ಮನೆಯಿಂದ ಹೋಗುವಾಗ ಬರುವಾಗ ಉದ್ದೇಶಪೂರ್ವಕವಾಗಿ ಮಂಜುನಾಥ್ ಮನೆಯ ಚಪ್ಪಲಿ ಸ್ಟ್ಯಾಂಡ್ ಬೀಳಿಸುವುದು, ಮನೆ ಮುಂದೆ ಬಿಡಿಸಿದ್ದ ರಂಗೋಲಿಯನ್ನು ಕಾಲಿಂದ ಅಳಿಸುವ ಕೆಲಸ ಮಾಡುತ್ತಿದ್ದರು. ನಿತ್ಯ ಕಿರುಕುಳ ಸಹಿಸಲಾರದ ಮಂಜುನಾಥ್ ಹಾಗೂ ಸರಿತಾ ದಂಪತಿ, ನೇಹಾಳ ಕೃತ್ಯಗಳನ್ನೊಳಗೊಂಡ ಸಿಸಿಟಿವಿ ದೃಶ್ಯಗಳ ಸಮೇತ ಬೊಮ್ಮನಹಳ್ಳಿ ಠಾಣೆಗೆ ದೂರು ನೀಡಿದ್ದು, ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Bangalore police case filed over shoe stand fight. Neighbours who were fighting for shoe stand being kept at the door side have ended up in the police station.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 06:22 pm
HK News Staffer
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 07:27 pm
HK News Staffer
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm